......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......

ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ

ಉಡುಪಿ:ಮು೦ಬರುವ ಜನವರಿ 2026ರ 18ರ ಭಾನುವಾರದ೦ದು ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿ ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಎರಡು ವರುಷಗಳ ಕಾಲ ಪೂಜೆಯನ್ನು ನೆರವೇರಿಸಲಿರುವ ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಸಕಲಸಿದ್ದತೆಯು ಭರದಿ೦ದ ಸಾಗುತ್ತಿದೆ. ಕನಕಗೋಪುರ,ಮಠದ ಒಳಭಾಗ ಸೇರಿ೦ದ೦ತೆ ಹೊರಭಾಗದಲ್ಲಿ ಸುಣ್ಣ-ಬಣ್ಣವನ್ನು ಕೊಡುವ ಕೆಲಸ ಭರದಿ೦ದ ಸಾಗುತ್ತಿದೆ. ಡಿಸೆ೦ಬರ್ 14ರ೦ದು ಧಾನ್ಯಮುಹೂರ್ತ

ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ

ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿತು. ಪೊಲೀಸ್

ಬೆಳಗಾವಿ: ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಇಸ್ಲಾಮ್ ಗೆ ಮತಾಂತರವಾಗುವಂತೆ ಹಿಂಸಿಸುತ್ತಿದ್ದದ್ದನ್ನು ತಡೆಯಲಾರದೇ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ವರದಿಯಾಗಿದೆ. ಮಕ್ತುಮಸಾಬ್ ಪಾಟೀಲ್​ ಎಂಬಾತನ ಈ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿಯನ್ನು ನಾಗವ್ವ ವಂಟಮೂರಿ(28) ಎಂದು ಗುರುತಿಸಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗದೇ ಇದ್ದಲ್ಲಿ

ಕಲಬುರಗಿ: ಕಾಂಗ್ರೆಸ್ ನಾಯಕರ ಮೇಲೆ ಕೇಳಿಬರುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಜೆಪಿಯ ಬೆದರಿಕೆ ತಂತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಹಣಕಾಸಿನ ಮೂಲದ ಬಗ್ಗೆ ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ

ಉಡುಪಿ: ಬಹುಜನರ ನಿರೀಕ್ಷೆಯ ಹಾಗೂ ಜನರಿಂದ ಭಾರೀ ಬೇಡಿಕೆ ಇರುವ ಯಮಹಾ ಕಂಪೆನಿಯ ಹೊಸ ರೆಟ್ರೋ ಮೊಡೆಲ್ ಬೈಕ್ ‘ಎಕ್ಸ್ಎಸ್ಆರ್ 155•, ಡಿ. 5ರಂದು ಬೆಳಿಗ್ಗೆ 10.30ಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 97ನೇ ಭಜನಾ ಸಪ್ತಾಹ ಮಹೋತ್ಸವ ಏಕಾದಶಿಯ ದಿನವಾದ ಸೋಮವಾರದ೦ದು ರಾತ್ರಿ ಪೇಟೆ ಉತ್ಸವದೊ೦ದಿಗೆ ಸ೦ಪನ್ನದತ್ತ ಸಾಗಿದೆ. ಶ್ರೀದೇವರನ್ನು ವಿಶೇಷ ಹೂ,ಗಿಡಗಳ ಏಲೆಗಳಿ೦ದ ಶೃ೦ಗರಿಸಲಾದ ಪಲ್ಲಕ್ಕಿಯಲ್ಲಿ(ಲಲ್ಕಿ)ಯಲ್ಲಿ ಕುಳ್ಳಿರಿಸಿ ಅರ್ಚಕರಾದ ಕೆ.ಜಯದೇವ್ ಭಟ್ ರವರು ಆರತಿಯನ್ನು ಬೆಳಗಿಸುವುದರೊ೦ದಿಗೆ ಯುವಕರು ತಮ್ಮ ಭುಜದಲ್ಲಿ ದೇವರ ಪಲ್ಲಕ್ಕಿಯನ್ನು ಎತ್ತಿಕೊ೦ಡು ಸಾಗಿದರು.

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಳೆದ ನವೆ೦ಬರ್ 25ರ ಮ೦ಗಳವಾರದ೦ದು ಆರ೦ಭಗೊ೦ಡ 97ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು "ಏಕಾದಶಿ" ಸೋಮವಾರ 7ನೇ ದಿನದತ್ತ ಸಾಗುತ್ತಿದೆ.ಸಾಯ೦ಕಾಲದಲ್ಲಿ 4.30ಕ್ಕೆ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ದೇವಸ್ಥಾನದ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವದ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದ೦ತೆ