ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ. 70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ.
ಕಠ್ಮಂಡು: ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಚೀನಾದ ಮಾಧ್ಯಮಗಳ ಪ್ರಕಾರ, ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್
ಬೆಂಗಳೂರು: ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್ಲೈನ್, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್ ತಿಳಿಸಿದ್ದಾರೆ. ಆರೋಗ್ಯ ಉಪ ನಿರ್ದೇಶಕ ಶಶಿಕಾಂತ್ ಶಂಭರ್ಕರ್ ಅವರ ಪ್ರಕಾರ,
ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಪತ್ರಿಕೆಯನ್ನು ಸೋಮವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ವಿದ್ಯುಕ್ತವಾಗಿ ಬಿಡುಗಡೆಮಾಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್
ಬಿಜಾಪುರ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲಾ ಯೋಧರು ದಾಂತೇವಾಡ ಡಿಆರ್ಜಿಯವರು ಎಂದು ಹೇಳಲಾಗಿದೆ. ಈ ಘಟನೆಯನ್ನು ಬಸ್ತಾರ್ ಐಜಿ ಪಿ
ಬೆಂಗಳೂರು:ಜ.06,ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ . ಇನ್ನು 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ. ಇನ್ನು ಈ ಕುರಿತು ಮಾಧ್ಯಮಕ್ಕೆ
ರಾಯಚೂರು, ಜನವರಿ 6: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ ಜನವರಿ
ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಜನವರಿ 2 ಗುರುವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರ ಶುಭ ಆಶೀರ್ವಾದಗಳೊ೦ದಿಗೆ ದೇವಸ್ಥಾನದ ಮು೦ಭಾಗದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಧ್ವಜಸ್ತ೦ಭ ಸ್ಥಾಪನೆಯ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ
ನವದೆಹಲಿ: ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೆಚ್ ಎಂಪಿವಿ ಪ್ರಕರಣಗಳನ್ನು ಪರೀಕ್ಷಿಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು