....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು

ಬೆಂಗಳೂರು: ಇನ್‌ಸ್ಪೆಕ್ಟರ್‌ಗೆ ರಕ್ತದಲ್ಲಿಯೇ ಪ್ರೇಮಪತ್ರ ಬರೆದು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಮಹಿಳೆ ಕೊನೆಗೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸಂಜನಾ ಅಲಿಯಾಸ್‌ ವನಜಾ(40) ಜೈಲು ಸೇರಿದ ಮಹಿಳೆ. ರಾಮಮೂರ್ತಿ ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಸತೀಶ್‌ ಅವರಿಗೆ ಕರೆ ಮಾಡಿ ಪ್ರೀತಿಸುವಂತೆ ವನಜಾ ಪೀಡಿಸುತ್ತಿದ್ದರು. ಹೀಗಾಗಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಿ

ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ

ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ 'ದ್ವೇಷ ರಾಜಕೀಯ' ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ

ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ

ಬೆಂಗಳೂರು: ಹೊಸ ಹೊಸ ಕ್ಯಾಲೆಂಡರ್ ವರ್ಷ 2026ರ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದು. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಕ್ರಮ ಕೈಗೊಳ್ಳುತ್ತಿವೆ. ಹೊಸ ವರ್ಷ ಆಚರಣೆ ವೇಳೆ ಯಾವುದೇ ಅವಘಡ,

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್

ಬಳ್ಳಾರಿ: ಯಮಹಾ ಕಂಪನಿಯ ಬೈಕ್​ಗಳನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆಯಲ್ಲೇ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ನಡೆದಿದೆ. ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ