ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ 2026 ರಲ್ಲಿ ರಕ್ಷಣಾ ಇಲಾಖೆಗೆ ಗಣನೀಯ ನಿಧಿ ಮೀಸಲಿರಿಸಿದ್ದು, Operation Sindoor ನಂತರ ಕೇಂದ್ರ ಸರ್ಕಾರ ಹಲವು ಕ್ರಮಗಳ ಕೈಗೊಂಡಿದೆ. 2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22

ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ

ಬೆಂಗಳೂರು: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದು, ಈ ನಡುವೆ ಸಾವಿನ ಹಿಂದಿನ ಕಾರಣ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ. ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಸಂಬಂಧ ಕಾನ್ಫಿಡೆಂಟ್‌ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್‌

ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಿಎಂ ದೇವೆಂದ್ರ ಫಡ್ನವೀಸ್‌, ಶರದ್‌ಪವಾರ್‌ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ

ಉಡುಪಿ, ಜನವರಿ 28: ಜಿಲ್ಲಾಡಳಿತದ ಸೂಚನೆಯನ್ನು ಸ್ವತಃ ಉಡುಪಿ ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಕೋಡಿಬೆಂಗ್ರೆ ಬೋಟ್​​ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ಗಣರಾಜ್ಯೋತ್ಸವದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ

ಬೆಂಗಳೂರು: ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಇಡಲು ತೀರ್ಮಾನ ಮಾಡಲಾಗಿದೆ. ಈ ಕುರಿತಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ರಾಜಭವನ ಚಲೋದಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಪ್ರತಿ ಗ್ರಾಮ ಪಂಚಾಯತಿಗೆ ಮಹಾತ್ಮಾ ಗಾಂಧಿ ಹೆಸರು.

ಸಲಾಮಾಂಕಾ: ಮಧ್ಯ ಮೆಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದ ನಂತರ ಬಂದೂಕುಧಾರಿಗಳು ಫುಟ್ಬಾಲ್ ಅಭಿಮಾನಿಗಳ ಮೇಲೆ ಗುಂಡು ಹಾರಿಸಿದ ದುರ್ಘಟನೆ ನಡೆದಿದ್ದು, ಸಂಘಟಿತ ಅಪರಾಧದ ಆರೋಪ ಹೊರಿಸಲಾದ ಹಿಂಸಾಚಾರದಿಂದ ಪೀಡಿತ ಪ್ರದೇಶದಲ್ಲಿ 11 ಜನರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ