ಬೆಂಗಳೂರು (ಫೆಬ್ರವರಿ 27): ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹೇಳಿದೆ.10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ ಪ್ರಮಾಣಪತ್ರವನ್ನು ಸರ್ಕಾರ ನೀಡಬೇಕಾಗಿದೆ. ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ
ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ. ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ
ಸುಡಾನ್, ಫೆಬ್ರವರಿ 27: ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ
ಉಡುಪಿ:ಫೆ.25ರಿ೦ದ ಮಾ.4ರವರೆಗೆ ಉಡುಪಿ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವದ ಸ೦ಭ್ರಮ. ಮ೦ಗಳವಾರ ಸಾಯ೦ಕಾಲ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವಕ್ಕೆ ಶ್ರೀಅನ೦ತೇಶ್ವರ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ದೇವಸ್ಥಾನದ ಆಡಳಿಯ ಮೊಕ್ತೇಸರರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,
ತಿರುಚ್ಚಿ: ಮಹಾಶಿವರಾತ್ರಿ ದಿನವಾದ ಇಂದು ಮುಂಜಾನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ
ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ
ನವದೆಹಲಿ: ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ
ಉಡುಪಿ:ಇತಿಹಾಸ ಪ್ರಸಿದ್ಧವಾದ ಉಡುಪಿಯ ಶ್ರೀ ಅನ೦ತೇಶ್ವರ ಸನ್ನಿಧಿಯಲ್ಲಿ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ಫೆ.25ರಿ೦ದ ಮಾ.4ರವರೆಗೆ ಜರಗಲಿದೆ. ಪರ೦ಪರಾತವಾಗಿ ಶುಭಸ೦ಪ್ರಾದಾಯಾನುಸಾರವಾಗಿ ಧಾರ್ಮಿಕ,ಸಾ೦ಸ್ಕೃತಿಕ ಕಾರ್ಯಕ್ರಮ ಸಮನ್ವಯದೊ೦ದಿಗೆ ನೆರವೇರಲಿದೆ.ಈ ಎ೦ಟು ದಿನಗಳ ಕಾಲ ನಡೆಯುವ ಶ್ರೀ ಸ್ವಾಮಿಯ ಸ೦ಭ್ರಮದ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಸಹಭಾಗಿಗಳಾಗಿ, ಶ್ರೀದೇವರ ಸಿರಿಮುಡಿ ,ಗ೦ಧ ಪ್ರಸಾದವನ್ನು