ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು

ಉಡುಪಿ:ರಾಜ್ಯದ ಬಿಜೆಪಿ ನಾಯಕರುಗಳು ನಮ್ಮ ರಾಜ್ಯದ ಜನಸಾಮಾನ್ಯರಿಗೆ ಕಾಂಗ್ರೆಸ್ ಪಕ್ಷದ ನೀಡುತ್ತಿರುವ ಗ್ಯಾರೆಂಟಿಯ ವಿರುದ್ಧ ದಿನನಿತ್ಯ ಯಾವುದಾದರೂ ಒಂದು ಹೇಳಿಕೆಯನ್ನು ನೀಡಿ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ. ಈ ಬಿಜೆಪಿಯು ಯಾವತ್ತೂ ಈ ಗ್ಯಾರಂಟಿ ಯೋಜನೆಯ ವಿರೋಧಿಗಳು ಎಂಬುದು ಸಾಬೀತುಪಡಿಸಿದ್ದಾರೆ. ಇದೀಗ ಅಮೆರಿಕದ ಕೈ ಗೊಂಬೆಯಾಗಿ ಕೇಂದ್ರ ಸರಕಾರ

ಉಡುಪಿ:09.03.2026 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ ಉಡುಪಿ ಇದರ ಮಹಿಳಾ ಸದಸ್ಯರಿಂದ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ" "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - ನಾರಿ ಶಕ್ತಿ" ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾದ, "ವಾತ್ಸಲ್ಯದ ಒಸಗೆ "

ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು . ಈ ಕಾರ್ಯಕ್ರಮವನ್ನು ಕುಮಾರಿ ನಯನ ಇವರು ಪ್ರಾರ್ಥಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಹೆಚ್

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿ ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವೆಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್

ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು 2023ರ ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ, 2028ರ ಚುನಾವಣೆಯಲ್ಲಿ ಅವರು ಮತ್ತೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ, ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳದಲ್ಲಿ ನಡೆದ

ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ

ವಾಷಿಂಗ್ಟನ್: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕಕ್ಕೆ ಭಾರಿ ದೊಡ್ಡ ಹಿನ್ನಡೆಯುಂಟಾಗಿದ್ದು, ಯುದ್ಧಸಾಮಗ್ರಿಗಳ ಗಂಭೀರ ಕೊರತೆ ಎದುರಾಗಿದೆ ಎಂದು ಅಲ್ ಜಜೀರಾ (Al Jazeera) ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕ ಸಂಘರ್ಷದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಅಮೆರಿಕಕ್ಕೆ ಹಾಲಿ ಯುದ್ಧದಲ್ಲಿ ಗಂಭೀರ ಹಿನ್ನಡೆಯಾಗುವ ಕುರಿತು ಪೆಂಟಗಾನ್ ಎಚ್ಚರಿಕೆ ನೀಡಿದ್ದು, ಮುಂದಿನ

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌