ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ

ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಡೆಕ್ಕನ್ ಹೆರಾಲ್ಡ್‌ನ ಮಾಜಿ ಸಹ ಸಂಪಾದಕ ಎನ್‌ಸಿ ಗುಂಡೂ ರಾವ್ (78b) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಪುತ್ರಿ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾವ್ ಅವರು

ಅಹ್ಮದಾಬಾದ್: ಅಹಮದಾಬಾದ್​ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ

ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28

ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ

ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮಂಗಳವಾರ ಶಿಗ್ಗಾಂವಿ ಹೊರವಲಯದಲ್ಲಿ ಊಟ ಮಾಡಿ

ಮೈಸೂರು: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಎರಡರ ಜೀವನಾಡಿಯಾಗಿರುವ ಕಬಿನಿ ಜಲಾಶಯವು ತುಂಬಿ ತುಳುಕುತ್ತಿದೆ, ಆದರೆ ಕಲ್ಲಿನ ರಚನೆಯಲ್ಲಿ ಸಣ್ಣ ಬಿರುಕುಗಳು ಮತ್ತು ಕುಳಿಗಳು ಬೆಳೆದಿದ್ದು, 50 ವರ್ಷ ಹಳೆಯ ಅಣೆಕಟ್ಟನ್ನು ರಕ್ಷಿಸುವ ಅಗತ್ಯವಿದೆ. ಜಲಾಶಯಕ್ಕೆ ತಕ್ಷಣ ಯಾವುದೇ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಉಂಟಾಗಿರುವ ಕುಳಿಗಳು

ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ. ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ

ಬ್ರೆಸಿಲಿಯಾ: ಬ್ರೆಜಿಲ್ ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಗಸದಲ್ಲಿಯೇ ಸ್ಫೋಟಗೊಂಡ ಪರಿಣಾಮ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಸುಮಾರು 21 ಮಂದಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹಾಟ್ ಏರ್ ಬಲೂನ್

ಟೆಹರಾನ್: ತನ್ನ ಅಣ್ವಸ್ತ್ರ ಕೇಂದ್ರಗಳ ಮೇಲೆ ಅಮೆರಿಕಾ ದಾಳಿ ಮಾಡಿ, ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ಜಗ್ಗದ ಇರಾನ್, ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮತ್ತೆ ಮುಂದುವರೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ