ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಮಂಗಳವಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು. ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3

ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು. ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ. ಬೆಂಗಳೂರು ಗ್ರಾಮಾಂತರ,

ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯಕ್ಕೆ ಅನುಗುಣವಾಗಿ ಅವರ ಅಂತ್ಯ ಸಂಸ್ಕಾರ

ಬೆಂಗಳೂರು, ಡಿಸೆಂಬರ್​ 11: 2024 ಕ್ಕೆ ವಿದಾಯ ಹೇಳಿ, 2025ನ್ನು ಬರ ಮಾಡಿಕೊಳ್ಳುವ ಸಮಯ ಬಂದೇ ಬಿಟ್ಟಿದೆ. ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಕೂಡ ಸಜ್ಜಾಗುತ್ತಿದೆ. ಹೀಗಾಗಿ ಈ ಬಾರಿ ಹೆಚ್ಚಿನ ಭದ್ರತೆಗಾಗಿ ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ವರ್ಷ

ಕಾರವಾರ, ಡಿಸೆಂಬರ್​ 11: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ  ತಾಲೂಕಿನ ಮುರುಡೇಶ್ವರದಲ್ಲಿ  ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ. ಮಂಗಳವಾರ ಶಾವಂತಿ (15)ಯ ಮೃತದೇಹ ಪತ್ತೆಯಾಗಿತ್ತು. ಇಂದು (ಡಿಸೆಂಬರ್​ 11) ದೀಕ್ಷಾ (15), ಲಾವಣ್ಯ (15), ವಂದನಾ (15) ಮೃತ ದೇಹಗಳು ಪತ್ತೆಯಾಗಿವೆ. ನಾಲ್ವರೂ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ

ಬೆಳಗಾವಿ, (ಡಿಸೆಂಬರ್ 11): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ

ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು

ಮುಂಬೈ: ಮುಂಬೈ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಬಸ್‌'ನ ಬ್ರೇಕ್ ಫೇಲ್ ಆಗಿ ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಘಟನೆಯಲ್ಲಿ