ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಂಗಳೂರು:ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ . ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು.

ಮಂಗಳೂರು :  ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು, ನವೆಂಬರ್ 21ರಂದು ಅಂಗಡಿ ಬಳಿಯಲ್ಲಿ ಆಟವಾಡುತ್ತಿದ್ದ ಹೆಣ್ಣು ಮಗುವಿಗೆ ಕಿರುಕುಳ

ಮಂಗಳೂರು: ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್

ಮಂಗಳೂರು, ನವೆಂಬರ್ 23: ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಝ್ ಬೇರೆಲ್ಲೂ ಕಾಣಸಿಗದು. ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಇಲ್ಲಿನ ರೈತಾಪಿ ಜನ ತಮ್ಮ ಕೃಷಿ ಕಾರ್ಯಗಳಿಗೆ ಬಳಸುವ ಕೋಣಗಳನ್ನು ಪಳಗಿಸಿ ಅವುಗಳನ್ನು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದು ಪ್ರತಿಷ್ಠೆ ಮೆರೆಯುವ ತನಕ ಈ ಕ್ರೀಡೆ

ಬೆಳ್ತಂಗಡಿ:ನ.19ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ.   ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ

ಮಂಗಳೂರು: ನ.15ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದು, ಸಾವಿನಲ್ಲೂ ಅವರು ಸಾರ್ಥಕತೆ ಮೆರೆದಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತ ದುರ್ದೈವಿ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದು

ಮಂಗಳೂರು: ನಗರದಲ್ಲಿ ತಂದೆ ಯೋರ್ವರು ತನ್ನ ಪುಟ್ಟ ಮಗುವಿನೊಂದಿಗೆ ಗುರುಪುರ ನದಿಗೆ ಹಾರಾಲು ಯತ್ನಿಸಿದ ಘಟನೆ ಸಂಭವಿಸಿದೆ‌. ಪ್ರತಿನಿತ್ಯ ಗಲಾಟೆ, ಮಾನಸಿಕ ಹಿಂಸೆ ತಾಳಲಾರದೇ ಪುಟ್ಟ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಗುರುಪುರಕ್ಕೆ ಯುವಕನೊಬ್ಬ ಬಂದಿದ್ದಾನೆ. ಜನ ಸಂಚಾರ ಇಲ್ಲದ ಸಂದರ್ಭ ಪುಟ್ಟ ಮಗುವನ್ನು ಎತ್ತಿಕೊಂಡು ಸೇತುವೆಯ

ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ(62) ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44) ಎಂದು ತಿಳಿಯಲಾಗಿದೆ. ಈತ