ಉಳ್ಳಾಲ: ಜೂ.28,ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ. ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ
ಮಂಗಳೂರು: ಭಾರೀ ಮಳೆಗೆ ಕರಾವಳಿಯ ಉಳ್ಳಾಲ ಬಳಿ ಮನೆ ಕುಸಿದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪ್ರವಹಿಸಿ ಇಬ್ಬರು ಬಲಿಯಾದ ದಾರುಣ ಘಟನೆ ಮಂಗಳೂರಿನ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಗುರುವಾರ ಮುಂಜಾನೆ ನಡೆದಿದೆ. ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು
ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45),
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ
ಮಂಗಳೂರು, ಜೂನ್.25: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ
ಮಂಗಳೂರು: ಮಂಗಳೂರು ಹೊರವಲಯದಲ್ಲಿರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ದಂಧೆಯಿಂದಾಗಿ ನಿಧಾನವಾಗಿ ಕಣ್ಮರೆಯಾಗುತ್ತಿದ್ದು, ಪರಿಣಾಮ ಈ ಪ್ರದೇಶದಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ 50ಕ್ಕೂ ಅಧಿಕ ಕುಟುಂಬಗಳು ಭಯ, ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್,
ಮಂಗಳೂರು, ಜೂ.24,ಕಾರ್ ಪೋರ್ಚ್ನಲ್ಲಿ ನಿಲ್ಲಿಸಿದ್ದ ವಿಟಾರಾ ಕಾರಿಗೆ ಬೆಂಕಿ ತಗುಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರೀ ಹಾನಿಯಾಗಿರುವ ಆಘಾತಕಾರಿ ಘಟನೆ ಭಾನುವಾರ ತಡರಾತ್ರಿ ಬೊಂದೇಲ್ನಲ್ಲಿ ನಡೆದಿದೆ. ಈ ಘಟನೆಯು ರಾತ್ರಿ 11:30 ರ ಸುಮಾರಿಗೆ ಸಂಭವಿಸಿದ್ದು, ದಾರಿಹೋಕರ ಗಮನಿಸಿದ ಹಿನ್ನಲೆ, ಅವರು ಪರಿಸ್ಥಿತಿಯನ್ನು ನಿರ್ವಹಿಸಲು ತ್ವರಿತವಾಗಿ ಕಾರ್ಯಪ್ರವೃತ್ತರಾದರು. ಪ್ರತ್ಯಕ್ಷದರ್ಶಿಗಳು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು
ಉಪ್ಪಿನಂಗಡಿ, ಜೂ. 19,ಮನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಕೃತ್ಯ ಎಸಗಿದ ಆರೋಪಿ ಅಪ್ರಾಪ್ತ ಬಾಲಕನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಮೃತ ಮಹಿಳೆ. ಜೂನ್ 16ರ ತಡರಾತ್ರಿ ಹೇಮಾವತಿ ಅವರು ಮನೆಯ ಕೋಣೆಯಲ್ಲಿ
ದಕ್ಷಿಣ ಕನ್ನಡ, ಜೂನ್ 17: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ