ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು

ಪುತ್ತೂರು :ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7) ಮೃತ ಬಾಲಕಿ. 5ನೇ ತರಗತಿಯ ವಿದ್ಯಾರ್ಥಿ

ಕಾರ್ಕಳ:ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಶ್ರೀಮತಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮೆಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಈ ದಿನ ದಸ್ತಗಿರಿ

ಮಂಗಳೂರು, ಸೆಪ್ಟೆಂಬರ್​ 26: ಧರ್ಮಸ್ಥಳ ಬುರುಡೆ ಕೇಸ್​ ವಿಚಾರದಲ್ಲಿ ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು,  ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರು ಮಾತನಾಡಿದರು. ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ. ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ

ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಸ್ನಾನಘಟ್ಟದ ​​ಬಳಿಯ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಹಿಂದಿನ ಸಾಕ್ಷಿಗಳ ಸಾಕ್ಷ್ಯ ಸಂಗ್ರಹಣೆಯ ಸಮಯದಲ್ಲಿ ಸಂಭಾವ್ಯ ಪುರಾವೆ ಸ್ಥಳವೆಂದು

ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.