ಕರ್ನಾಟಕ: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಕಾನ್ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ
ತುಮಕೂರು: ಕ್ಯಾಂಟರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಆ್ಯಕ್ಸೆಲ್ ಬ್ಲೇಡ್ ಕಟ್ ಆಗಿ ಕ್ಯಾಂಟರ್ರೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಆಟೋದಲ್ಲಿದ್ದ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು
ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. ಎಎನ್ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ
ಬೆಂಗಳೂರು: ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ
ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಅದರಂತೆ ಇಂದು(ಜೂ.14) ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ(BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಶಾಸಕ ಎಸ್.ಎನ್ ಚನ್ನಬಸಪ್ಪ(S.N Channabasappa) ನೇತೃತ್ವದಲ್ಲಿ
ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ 66 ಶಾಸಕರಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮೊದಲ ದಿನವಾದ ಭಾನುವಾರ ಮಧ್ಯಾಹ್ನ 1
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ