ದಾವಣಗೆರೆ: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ
ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು
ಬೆಂಗಳೂರು: ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್ನಿಂದ ಸಾವನ್ನಪ್ಪಿದ್ದಾರೆ. ಲಿವರ್ ಕ್ಯಾನ್ಸರ್ ಕೊನೆಯ ಹಂತದಲ್ಲಿರುವಾಗ ತಿಳಿದಿದ್ದು, ಚಿಕಿತ್ಸೆ ಪಡೆಯಲು 15 ದಿನಗಳ ರಜೆ ತೆಗೆದುಕೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಹುಟ್ಟೂರು
ಮೈಸೂರು: ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿಗಳ ಘೋಷಣೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲು ಸಹಕಾರಿಯಾಗಿದ್ದು, ಈ ಘೋಷಣೆ ರಾಜ್ಯದಲ್ಲಷ್ಟೇ ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇತರೆ ರಾಜ್ಯಗಳಲ್ಲೂ ವಿಧಾನಸಭಾ ಚುನಾವಣೆಗಳು ಎದುರಾಗಲಿವೆ. ಒಂದು ವೇಳೆ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. “ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರ್ಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು. 12 ತಿಂಗಳ
ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 2.85
ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. ಜಾರ್ಜ್ ಚು
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ