ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ

ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ‌ ಕಾರ್ತಿಕ್ ಮೃತಪಟ್ಟವರು. ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.  ಕಾರಿನಲ್ಲಿದ್ದ

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ