...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ

ಸರ್ವರಿಗೂ ಆದರದ ಸ್ವಾಗತ

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ, ಸತೀಶ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಅಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ

ಬೆಂಗಳೂರು, (ಫೆಬ್ರವರಿ 17): ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್​ಗೆ ಇದೀಗ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ

ಬೆಂಗಳೂರು, (ಫೆಬ್ರವರಿ 17): ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ

ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಬೆಂಗಳೂರು, ಫೆಬ್ರವರಿ 17: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್​ 7ರಂದು ಬಜೆಟ್  ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಬಜೆಟ್​ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ