ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ

ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಇಂದು (ಮಾರ್ಚ್​

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್

ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಗುಪ್ತಚರ ಇಲಾಖೆ(DRI) ಈ ಹಿಂದೆ ಸುಮಾರು 14.56 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದನ್ನು ಪತ್ತೆಹಚ್ಚಿದೆ. ದುಬೈಯಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಸಾಹಿಲ್ ಸಕಾರಿಯಾ ಜೈನ್ ಅವರ ಸಹಾಯದಿಂದ ರನ್ಯಾ ರಾವ್ ಭಾರತದಲ್ಲಿ ಮಾರಾಟ ಮಾಡಲು ಸಹಾಯ

ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ನವೆಂಬರ್

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದ್ದು, ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ

ಕಲಬುರಗಿ: ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು

ನವದೆಹಲಿ: ಕೇಂದ್ರ ಸರ್ಕಾರ 2024-25ರ ಆರ್ಥಿಕ ವರ್ಷದಲ್ಲಿ ತ್ರಿಪುರಾ ಮತ್ತು ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದ ಎರಡನೇ ಕಂತನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದಾದ್ಯಂತ ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 5,375 ಅರ್ಹ ಗ್ರಾಮ ಪಂಚಾಯಿತಿಗಳಿಗೆ 404.9678 ಕೋಟಿ ರೂ.ಗಳ ಸಂಯೋಜಿತ ಅನುದಾನವನ್ನು ಬಿಡುಗಡೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗುರುವಾರ ವಜಾಗೊಳಿಸಿದೆ. ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ