ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.
ಬೆಂಗಳೂರು, (ಜೂನ್ 07): ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ
ನವದೆಹಲಿ, ಜೂ. 05: ಮಂಡ್ಯ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಎನ್ಡಿಎ ಸಭೆ ಹಿನ್ನೆಲೆ ದೆಹಲಿಗೆ ತೆರಳಿದ್ದು, ಅವರು ಕೃಷಿ ಖಾತೆಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಅವರೊಂದಿಗೆ ಸಭೆ
ಹಾಸನ: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ
ಬೆಳಗಾವಿ, ಜೂನ್ 5: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಸಾಧ್ಯವಾಗದೇ ಇರುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇದೀಗ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಆ ಬಗ್ಗೆ ಮಾತನಾಡಿದ್ದು, ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಹೇಳಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ
ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ