ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಪ್ರಕರಣಗಳು ದಾಖಲಾಗಿದ್ದು, 118 ಕಿ.ಮೀ ಉದ್ದದ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿದಿವೆ. ಹೆಚ್ಚಿನ ಚಾಲಕರು, ಸಹ ಪ್ರಯಾಣಿಕರು
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ. ‘ಮೊದಲು ನೀಡಿದ್ದ ನೋಟಿಸ್ಗೆ ಪ್ರತಿಕ್ರಿಯಿಸಿದ್ದ ತಾವು,
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಆಯ್ಕೆಯಾಗುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಂತಿಮಗೊಳಿಸಿದ್ದರೂ, ಪಕ್ಷದ ಹೈಕಮಾಂಡ್, ವಿಶೇಷವಾಗಿ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ ಪಟ್ಟಿಗೆ ಅನುಮತಿ ನೀಡುವ ಸಾಧ್ಯತೆಯಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ
ಕಾರವಾರ, ಮೇ.30: ಶಿವಭಕ್ತರ ಪುಣ್ಯ ಕ್ಷೇತ್ರ, ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಮಳೆಯಿಂದ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಗೋಕರ್ಣದಲ್ಲಿನ ಮಹಾಬಲೇಶ್ವರ ದೇವಸ್ಥಾನದ
ರಾಯಚೂರು: ನಗರದ ಮಹಾವೀರ ಚೌಕ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ. ರಾಯಚೂರಿನ ಆರ್.ಕೆ ಭಂಡಾರಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ
ಕೊಪ್ಪಳ, ಮೇ 28: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿರುವ ಘಟನೆ ನಡೆದಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು. ವಸಂತಾ ಮನೆ ಒಡತಿ. ವಸಂತಾ ಅವರ ತಾಯಿ ರಾಜೇಶ್ವರಿ, ಮಗ ಸಾಯಿಧರ್ಮತೇಜ್. ಆಂಧ್ರ ಪ್ರದೇಶದ
ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ. ಈ ಕುರಿತು ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, "ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು" ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್