ಜಮ್ಮು: ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ (LOC) ಮಂಗಳವಾರ ಸಂಜೆ ಭಾರತದ ಗಡಿಯೊಳಗೆ ನುಗ್ಗಿದ ಪಾಕಿಸ್ತಾನಿ ಡ್ರೋನ್ಗಳತ್ತ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ
ಢಾಕಾ, ಜನವರಿ 13: ಬಾಂಗ್ಲಾದೇಶದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್ ಚಾಕಿ, ಅವಾಮಿ ಲೀಗ್ನ ಪಬ್ನಾ
ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ "ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಅತ್ಯಪರೂಪದ ಹವಾಮಾನ ವಿದ್ಯಾಮಾನ ನಡೆಯುತ್ತಿದ್ದು 135 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜನವರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ಹವಾಮಾನ ವ್ಯವಸ್ಥೆಯು ಆಳವಾದ ವಾಯುಭಾರ ಕುಸಿತವಾಗಿ ಏಕೀಕರಿಸಲ್ಪಟ್ಟಿದ್ದು, ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕಫದ ಸಮಸ್ಯೆಯಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರಿಗೆ ಕೆಲ ದಿನಗಳಿಂದ ಕೆಮ್ಮು ಮತ್ತು ಕಫದ ಸಮಸ್ಯೆಯಿದೆ. ದೆಹಲಿಯಲ್ಲಿ ಈಗ ತೀವ್ರ
ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಳಪತಿ ವಿಜಯ್ ಗೆ ಕೇಂದ್ರ ತನಿಖಾ ತಂಡ CBI ಶಾಕ್ ನೀಡಿದೆ. ಜನವರಿ 12 ರಂದು ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್
ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್ಲ್ಯಾಂಡ್): ಸ್ವಿಟ್ಜರ್ಲ್ಯಾಂಡ್ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ
ಇಂದೋರ್, ಡಿಸೆಂಬರ್ 31: ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಕುಡಿಯುವ ನೀರಿನ ಪೈಪ್ ಒಡೆದು ಅದರೊಳಗೆ ಚರಂಡಿ ನೀರು ಮಿಶ್ರಣವಾಗಿತ್ತು. ಈ ಕುರಿತು ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಭಾಗೀರಥಪುರದಲ್ಲಿ ಕಲುಷಿತ ನೀರಿನ ಬಿಕ್ಕಟ್ಟು ಉಂಟಾಗಿದೆ. ನಗರದ ಆಸ್ಪತ್ರೆಗಳಲ್ಲಿ 100 ಕ್ಕೂ
ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದೂ ಯುವಕ ದೀಪು ಚಂದ್ರ ದಾಸ್ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ
ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಭವ್ಯವಾದ ಚಿನ್ನದ ವರ್ಣದ ಪ್ರತಿಮೆಯ ಸ್ಥಾಪನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ನಿನ್ನೆ ಅಯೋಧ್ಯೆ ತಲುಪಿದೆ. ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ