Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ

ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿದೆ ಎಂದು ವರದಿಯಾಗಿದೆ. ವಾಹನದಲ್ಲಿ ಎಷ್ಟು

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ

ಕಳೆದ 5 ದಿನಗಳಲ್ಲಿ ಬಲೂಚಿಸ್ತಾನ್ ಮತ್ತು ಪಾಕಿಸ್ತಾನದ ಇತರ ಪ್ರಾಂತ್ಯಗಳಲ್ಲಿ ಸುಮಾರು 84 ದಾಳಿಗಳು ನಡೆದಿವೆ. ಈ ಎಲ್ಲಾ ದಾಳಿಗಳ ಜವಾಬ್ದಾರಿಯನ್ನು ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLA) ವಹಿಸಿಕೊಂಡಿದೆ. ಇದನ್ನು 'ಆಪರೇಷನ್ ಬಾಮ್' ನ ಭಾಗವೆಂದು ಹೇಳಿದೆ. ಜುಲೈ 8ರಂದು ಬಿಎಲ್ಎಫ್ ಆಪರೇಷನ್ ಬಾಮ್ ಆರಂಭವನ್ನು ಘೋಷಿಸಿತ್ತು. 84 ಸಂಘಟಿತ

ಗುಜರಾತ್: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ

ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ