ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ. ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,ಮೈಲಂನಲ್ಲಿನ

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ

ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದ ಜಯ್ ಶಾ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ಅಧ್ಯಕ್ಷರಾಗಿ ಅಧಿಕಾರ

ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ

ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ

ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ

ನವದೆಹಲಿ: ಇತ್ತೀಚೆಗಷ್ಟೇ ಸೇರ್ಪಡೆಗೊಂಡ ಭಾರತದ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿ.ಮೀ.ಗಳ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತೀಯ ನೌಕಾಪಡೆಯು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ

ನಾಗಪಟ್ಟಿಣಂ(ತಮಿಳು ನಾಡು): ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸತತ ಎರಡನೇ ದಿನವೂ ತಮಿಳು ನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಯ ತಗ್ಗು ಮತ್ತು ದುರ್ಬಲ ಪ್ರದೇಶಗಳಲ್ಲಿ ವಾಸಿಸುವ 1,200 ಕ್ಕೂ ಹೆಚ್ಚು ಜನರನ್ನು ಆಶ್ರಯ ಮತ್ತು ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ನಾಗಪಟ್ಟಣಂನಲ್ಲಿ, ಜಿಲ್ಲೆಯ 12 ಶಿಬಿರಗಳಲ್ಲಿ 371 ಕುಟುಂಬಗಳ

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ

ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ