ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ಇದೇ 2024ನೇ ಇಸವಿ ನವೆ೦ಬರ್ ತಿ೦ಗಳಲ್ಲಿ ಅಮೇರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಈಗಲೇ ಘೋಷಿತರಾಗಿದ್ದ ಹಾಲಿ ಅಧ್ಯಕ್ಷ ಜೊಬೈಡನ್ ರವರು ಅನಾರೋಗ್ಯ ಹಾಗೂ ವೃದ್ದಾಪ್ಯದ ಕಾರಣದಿ೦ದ ರಿಪ್ಲಬಿಕನ್ ಪಕ್ಷದ ಡೊನಾಲ್ಡ್ ಟ್ರ೦ಪನನ್ನು ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಅಸಮರ್ಥರೆ೦ದು ಸ್ವಪಕ್ಷೀಯರ ಟೀಕೆಗೆ ಹಾಗೂ

ಟೆಲ್ ಅವೀವ್: ರಾಜಧಾನಿ ಟೆಲ್ ಅವೀವ್ ಮೇಲೆ ದಾಳಿ ಮಾಡಿದ್ದ ಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌದು.. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದ್ದು,

ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್‌ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ. ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್‌ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್‌, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ

ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ

ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅವರನ್ನು ಕೊಲೆ ಮಾಡಲೆಂದು ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಆ ಗುಂಡು ಕೊಂಚ ಗುರಿ ತಪ್ಪಿ ಟ್ರಂಪ್ ಕಿವಿಯನ್ನು ಸೀಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರಿಗೆ ಗುಂಡು

ತರಗತಿ ನಡೆಯುತ್ತಿರುವಾಗ ಎರಡು ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳ್ದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ

ವಿಯೆನ್ನಾ/ ಅಸ್ಟ್ರೀ ಯಾ, ಜು. 10,ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಟ್ರೀಯಾ ರಾಜಧಾನಿ ವಿಯೆನ್ನಾಗೆ ಮಂ ಗಳವಾರ ತಡರಾತ್ರಿ ಬಂದಿಳಿದರು. ರಷ್ಯಾ ಪ್ರವಾಸ ಮುಗಿಸಿ ಅವರು ಅಸ್ಟ್ರೀಯಾ ಪ್ರವಾಸ ಕೈಗೊಂಡಿದ್ದಾರೆ. ಅಸ್ಟ್ರೀಯಾದ ಚಾನ್ಸಲರ್ ಕಾರ್ಲ್ ನೇಹ್ಮರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ

ನವದೆಹಲಿ: ಬಾರ್ಬಡೋಸ್‌ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ