ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ನವದೆಹಲಿ: ಬದ್ಧ ವೈರಿ ಕ್ರಿಕೆಟ್ ತಂಡಗಳಾದ ಭಾರತ- ಪಾಕಿಸ್ತಾನ ಕೊಲಂಬೋದಲ್ಲಿ ಫೆ.15 ರಂದು ಮುಖಾಮುಖಿಯಾಗಲಿವೆ. ಐಸಿಸಿ ಈ ವೇಳಾಪಟ್ಟಿಯನ್ನು ಘೋಷಿಸಿದ್ದು ಟಿ20 ವಿಶ್ವಕಪ್ ನ ಭಾಗವಾಗಿ ಉಭಯ ತಂಡಗಳ ಪಂದ್ಯವನ್ನು ದೃಢಪಡಿಸಿದೆ.ಮುಂಬೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಶ್ರೀಲಂಕಾ ಸಹ-ಆತಿಥ್ಯ ವಹಿಸುತ್ತಿರುವ 20 ತಂಡಗಳ ಸ್ಪರ್ಧೆಯಲ್ಲಿ

ಗಾಜಾ: ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತೊಮ್ಮೆ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೇ ಜನರು ಗಾಯಗೊಂಡಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ

ನೈಜೀರಿಯಾ: ನವೆಂಬರ್ 22: ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ ಸೇಂಟ್ ಮೇರಿ ಶಾಲೆಯಲ್ಲಿ ಈ ದಾಳಿ ನಡೆದಿದೆ. ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​ಪ್ರಕಾರ,

ಕಾಂಗೋ:ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ

ಮೆಕ್ಕಾ, ನ. 17 ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸೋಮವಾರ ನಸುಕಿನ ಜಾವ 1: 30ಕ್ಕೆ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಹೀನಾಯ ಸೋಲು ಕಂಡಿದ್ದು, ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತನ್ನ ಕೈಯಾರೆ ಹಾಳು ಮಾಡಿಕೊಂಡಿದೆ. ಹೌದು.. ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ. ದಕ್ಷಿಣ

ಮಾಸ್ಕೋ: ರಷ್ಯಾದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಆಗಸದಲ್ಲಿ ಹಾರುತ್ತಿದ್ದಾಗಲೇ ಹೆಲಿಕಾಪ್ಟರ್ 2 ತುಂಡಾಗಿ ಪತನವಾಗಿದೆ. ರಷ್ಯಾದ ಡಾಗೆಸ್ತಾನ್ ಗಣರಾಜ್ಯದ ಅಚಿ-ಸು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ರಷ್ಯಾದ ರಕ್ಷಣಾ ಸಂಬಂಧಿತ ವಾಯುಯಾನ Ka-226 ಹೆಲಿಕಾಪ್ಟರ್(Helicopter)ಪತನಗೊಂಡು ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಘಟನೆ

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ

ಬುಸಾನ್: ಹಲವು ತಿಂಗಳುಗಳಿಂದ ನಡೆಯುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಂತರ ವಿಶ್ವದ ಎರಡು ದೊಡ್ಡ ಆರ್ಥಿಕ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸ್ಥಿರಗೊಳಿಸುವ ಪ್ರಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಟ್ರಂಪ್ ಅವರು