Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು

ಹಾನಗಲ್: ಉಪಚುನಾವಣೆ ಪ್ರಚಾರ ಅಖಾಡಕ್ಕೆ ಮೊದಲ ಬಾರಿ ಧುಮುಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಾನಗಲ್ಲ ತಾಲೂಕಿನ ಕ್ರೀಡಾಂಗಣದಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿದೆ ಮೋದಿ ಅಚ್ಚೇದಿನ್‌ ಎಂದು ಜರಿದಿದ್ದ ಸಿದ್ದರಾಮಯ್ಯ

ಮಲ್ಪೆ: ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರ‍ೀಯ ಸೇವಾ ಯೋಜನೆ, ಎನ್.ಸಿ.ಸಿ., ಭಾರತ್ ಸ್ಕೌಟ್ಸ್ & ಗೈಡ್ಸ್, ಯುವಕ ಮಂಡಲಗಳು, ಸ್ವಚ್ಛ ಭಾರತ್ ಫ್ರೆಂಡ್ಸ್ ಹಾಗೂ

ಉಡುಪಿ: ಅನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ನಡೆದ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವಾಗಿದ್ದು, ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 6 ಮಂದಿ ಅರ್ಚಕರು ಬ್ರಹ್ಮಕುಂಡಿಕೆಗೆ ಪೂಜೆ ಸಲ್ಲಿಸಿದ್ದರು. ಮಧ್ಯಾಹ್ನ 1:11 ಕ್ಕೆ ಕಾವೇರಿ ಉದ್ಭವಾಗಿದ್ದು ಸಹಸ್ರಾರು ಮಂದಿ ತೀರ್ಥ ಪಡೆದು

ಕೊಟ್ಟಾಯಂ: ಒಂದೇ ಕುಟುಂಬದ ಆರು ಮಂದಿಯ ಪೈಕಿ ಮೂವರು ಮೃತಪಟ್ಟು ಇತರ 18 ಮಂದಿ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹದಿಂದ ಉಂಟಾಗಿದೆ. ದೇವರನಾಡು ಕೇರಳದಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮತ್ತು ಇಡುಕ್ಕಿ ಜಿಲ್ಲೆಯ ಪಶ್ಚಿಮ ಭಾಗಗಳಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರೇ ಕಾಂಗ್ರೆಸ್‌ ಪಕ್ಷಕ್ಕೆ  ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಕುತೂಲಹ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಆರಂಭವಾಗಿದ್ದು, ಕೊರೊನಾ ಕಾರಣದಿಂದ ನಡೆಯದೇ ಉಳಿದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆ

ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸರ್ವಾಲಂಕಾರ ಭೂಷಿತನಾಗಿದ್ದ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಅಂಬಾರಿ ಮತ್ತು ಅದರೊಳಗಿನ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಶಾಂತಚಿತ್ತದಿಂದ ಹೆಜ್ಜೆ ಹಾಕಿದ. ಆತನ ಎಡಬಲದಲ್ಲಿ ಕುಮ್ಕಿ ಆನೆಗಳು ಸಾಥ್

ಕಂದಹಾರ್: ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ  ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಾರವಷ್ಟೇ ಕುಂದುಜ್ ನಲ್ಲಿ  ಶಿಯಾ ಮಸೀದಿ ಮೇಲೆ  ನಡೆದಿದ್ದ ದಾಳಿಯಲ್ಲಿ ನೂರಾರು ಜನರು ಅಸುನೀಗಿದ್ದರು. ಇಸ್ಲಾಮಿಕ್ ಸ್ಟೇಟ್ ಗ್ರೂಪ್ ಈ ದಾಳಿಯ ಹೊಣೆ