Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉಡುಪಿಯ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ಜರಗುವ ಲಕ್ಷದೀಪಕ್ಕೆ ಬಿರುಸಿನ ಸಿದ್ದತೆಯನ್ನು ನಡೆಸಲಾಗುತ್ತಿದೆ. ರಥಬೀದಿಯ ಸುತ್ತಲೂ ಗುರ್ಜಿಯನ್ನು ಹಾಕುವ ಕೆಲಸವು ಭರದಿ೦ದ ನಡೆಯುತ್ತಿದೆ. ಉತ್ಥಾನದ್ವಾದಶಿಯ೦ದು ಆರ೦ಭಗೊಳ್ಳಲಿರುವ ಲಕ್ಷದೀಪವು ಕೆರೆ ಉತ್ಸವದೊ೦ದಿಗೆ ಆರ೦ಭಗೊಳ್ಳಲಿದೆ.ನ೦ತರ ಶ್ರೀದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ತೇರನ್ನು ನಡೆಸಲಾಗುತ್ತದೆ.ಉತ್ಥಾನ ದ್ವಾದಶಿಯ೦ದು ಮಧ್ಯಾಹ್ನ ಹಣತೆಯನ್ನು ಇಡುವ ಕಾರ್ಯಕ್ರಮದೊ೦ದಿದೆ

ಕುಂದಾಪುರ, ಅ 28 . ತಲ್ಲೂರಿನಲ್ಲಿ ಅಕ್ಟೋಬರ್ 27ರಂದು 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಭಾರತಿ ಅವರ ಪುತ್ರಿ ಅನುಶ್ರೀ ಮನೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪಿದ್ದಾಳೆ. ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವುದರೊಂದಿಗೆ ನಾಡಿನಾದ್ಯಂತ ಕನ್ನಡದ ಕಂಪು ಪಸರಿಸಿತು. ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯಮಂತ್ರಿ,

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಆಯೋಜಿಸಿರುವ ' ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಆಕಾಶದಲ್ಲೂ ಗಾಯನ ಮೊಳಗಿದೆ. ಇಂದು ಬೆಳಂ ಬೆಳಗ್ಗೆಯೇ ಸ್ಪೈಸ್ ಜೆಟ್ ನಲ್ಲಿ ವಿಮಾನದ ಸಿಬ್ಬಂದಿ ಹಾಗೂ ಪ್ರಯಾಣಿಕರು  ' ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸುವ

ಬೆಂಗಳೂರು: ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶುಕ್ರವಾರ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಜೆಡಿಎಸ್ ಮೂಲಗಳು ದಿ ನ್ಯೂ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಶಿವಮೂರ್ತಿ ಮುರುಘಾ ಶರಣರು, ಹಾಸ್ಟೆಲ್ ವಾರ್ಡನ್ ಹಾಗೂ ಮತ್ತೋರ್ವರ ವಿರುದ್ಧ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಧೀಶರ ಮುಂದೆ

ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆಯನ್ನು ಚುರುಕುಗೊಳಿಸಿರುವ ರಾಮನಗರ ಜಿಲ್ಲಾ ಪೊಲೀಸರು, ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಮಹಿಳೆಯ ಧ್ವನಿ ವಿಡಿಯೋದಲ್ಲಿ

ಕನ್ನಡಿಗರ ಪ್ರೀತಿಯ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು ಸಹಜವಾಗಿ ನಟಿಸಿದ ಕೊನೆಯ ಚಿತ್ರ 'ಗಂಧದ ಗುಡಿ' (Gandhada Gudi)ಇಂದು ಶುಕ್ರವಾರ ಬಿಡುಗಡೆಯಾಗಿದ್ದು ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳ ಮುಂದೆ ಜನಸಾಗರ ಸೇರಿದೆ. ಪುನೀತ್ ರಾಜ್ ಕುಮಾರ್(Puneet Rajkumar) ಅವರ ಬಹುನಿರೀಕ್ಷಿತ

ಉಳ್ಳಾಲ, ಅ 27. ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಮ್ದಾಯ ದೈವಸ್ಥಾನದ ಬಳಿ ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೈದ ಘಟನೆ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು. ಇಂದು ಮಧ್ಯಾಹ್ನ

ಬಾರ್ಕೂರು, ಅ 27. ಒಂಬತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ 44 ವರ್ಷದ ಮೃತದೇಹ ಗುರುವಾರ ಅಕ್ಟೋಬರ್ 27 ರಂದು ಬಾರ್ಕೂರಿನ ಕಂಬಳ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಪ್ರವೀಣ್ ಬೆಳ್ಚಡ ಎಂದು ಗುರುತಿಸಲಾಗಿದೆ. ಅವರು ಅಕ್ಟೋಬರ್ 18 ರಂದು ನೇಜಾರ್‌ನಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ