BREAKING NEWS > |
ಹಾಸನ: ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ. ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ. ಜಿಲ್ಲಾ
ಪ್ರಯಾಗ್ ರಾಜ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಪ್ರಯಾಗ್ ರಾಜ್ ದ ವಿಂದ್ಯಾಚಲ ಎಂಬಲ್ಲಿ ಹಂಡಿಯಾ ಹೆದ್ದಾರಿ ಪಕ್ಕ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಇನ್ನು 5 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು
ಕೇದಾರನಾಥ್ : ಉತ್ತರಾಖಂಡ ರಾಜ್ಯದ ವಿಶ್ವವಿಖ್ಯಾತ ಕೇದಾರನಾಥ ದೇವಸ್ಥಾನದ ಗರ್ಭಗುಡಿಯ ಒಳಗಿನ ಗೋಡೆಗಳು ಚಿನ್ನದ ಪದರಗಳಿಂದ ಕಂಗೊಳಿಸಲಿವೆ. ಐಐಟಿ ರೂರ್ಕಿಯ ಇಂಜಿನಿಯರ್ಗಳ ಜೊತೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಇಬ್ಬರು ಅಧಿಕಾರಿಗಳು ಗರ್ಭಗುಡಿಯನ್ನು ಅಲಂಕರಿಸಲು ಚಿನ್ನದ ಪದರ ಹೊದಿಕೆ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಗೋಡೆಗಳ ಹೊರತಾಗಿ, ಜಲೇರಿ (ಶಿವಲಿಂಗಕ್ಕೆ ಹೋಗುವ ಸಣ್ಣ ಕಾರಿಡಾರ್) ಮತ್ತು ಸೀಲಿಂಗ್
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣ ಹೊಸ ತಿರುವುಪಡೆದುಕೊಂಡಿದ್ದು, ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಇದೀಗ ಹಲವು ಪ್ರಶ್ನೆಗಳು ಎದ್ದಿದೆ. ಇನ್ನು ಕೆಲ ವೈಯಕ್ತಿಕ ಕಾರಣಗಳಿಂದ ಸ್ವಾಮೀಜಿಗಳು ಬೇಸತ್ತಿದ್ರಾ ಅನ್ನೋ ಅನುಮಾನ ಮೂಡಿದೆ. ಮುಖಂರರೊಬ್ಬರ ಬೆದರಿಕೆಗೆ ಹೆದರಿ ಬಸವಲಿಂಗ ಸ್ವಾಮೀಜಿ
ಕಿಸ್ಮಾಯೊ (ಸೊಮಾಲಿಯಾ), ಅ 24: ಸೊಮಾಲಿಯಾದ ಬಂದರು ನಗರ ಕಿಸ್ಮಾಯೊದಲ್ಲಿನ ಹೋಟೆಲ್ನಲ್ಲಿ ಅಲ್-ಶಬಾಬ್ ಉಗ್ರ ಸಂಘಟನೆ ಭಾನುವಾರ ತಡರಾತ್ರಿ ನಡೆಸಿದ ಗುಂಡಿನ ದಾಳಿಯಲ್ಲಿ ಮಕ್ಕಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. ಸ್ಪೋಟಕಗಳನ್ನು ತುಂಬಿ ಬಂದಿದ್ದ ಕಾರು ಹೊಟೇಲ್ ತವಕಲ್ ಗೇಟ್ ಒಳಗೆ ನುಗ್ಗಿದೆ. ಕೂಡಲೇ ಕಾರಿನಲ್ಲಿದ್ದ ಬಂದೂಕುಧಾರಿಗಳು ಗುಂಡಿನ ದಾಳಿ
ಕಾರ್ಗಿಲ್: ಭಾರತ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ಆದರೆ ರಾಷ್ಟ್ರದ ಮೇಲೆ ಯಾರೇ ಕೆಟ್ಟ ದೃಷ್ಟಿ ಬೀರಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಶಕ್ತಿ ಮತ್ತು ತಂತ್ರಗಳನ್ನು ನಮ್ಮ ಸಶಸ್ತ್ರ ಪಡೆ ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಲಡಾಖ್ನ
ಬೆಂಗಳೂರು: ಅನಾರೋಗ್ಯಕ್ಕೀಡಾಗಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 73 ವರ್ಷದ ಜಾನ್ ಶಾ ಅವರು ಅನಾರೋಗ್ಯಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಜಾನ್ ಶಾ ವಿಧಿವಶರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಜಾನ್ ಶಾ ಅವರು
ಬೆಂಗಳೂರು: ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆ– 2022 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾನುವಾರ ಅಂಕಿತ ಹಾಕಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿಗೆ ಅನುಗುಣವಾಗಿ ಸುಗ್ರೀವಾಜ್ಞೆ ಅಂಗೀಕಾರವಾಗುವುದರಿಂದ ಪರಿಶಿಷ್ಟ ಜಾತಿಯ ಮೀಸಲಾತಿಯು ಈಗಿರುವ ಶೇ 15 ರಿಂದ ಶೇ.17ಕ್ಕೆ
ನವದೆಹಲಿ: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಸ್ಪೇನ್ನಲ್ಲಿ ನಡೆದ U23 ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಫೈನಲ್ನಲ್ಲಿ ಟರ್ಕಿಯ ಕುಸ್ತಿಪಟು ಅಹ್ಮತ್ ಡುಮನ್ ವಿರುದ್ಧ 12-4 ಅಂತರದ ಗೆಲುವು ಸಾಧಿಸುವ ಮೂಲಕ 18 ವರ್ಷದ ಆಟಗಾರ ಈ
ಉಡುಪಿ ಅ.23 (karavalikirana.com): ಕರಾವಳಿಯ ಸೊಗಡನ್ನು ಹೊಂದಿರುವ ಕಾಂತಾರ ಚಿತ್ರ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸುಗಳಿಸುತ್ತಿದೆ. ಕನ್ನಡದ ಈ ಚಿತ್ರ ಇದೀಗ ರಾಜ್ಯದ ಗಡಿಯಾಚೆಗೂ ಭಾರೀ ಸದ್ದುಮಾಡುತ್ತಿದೆ. ಅಲ್ಲದೆ ಇದೀಗ ಗೂಡುದೀಪದಲ್ಲೂ ಕಾಂತಾರ ಚಿತ್ರದ ಚಿತ್ತಾರ ಮೂಡಿಬಂದಿದೆ. ಸಾಮಾಜಿಕ ಕಾರ್ಯಕರ್ತ ಗಣೇಶ ರಾಜ್ ಸರಳೇಬೆಟ್ಟು ಮತ್ತು ಅವರ ಪುತ್ರ