Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಜಕಾರ್ತಾ, ನ 21. ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಸೋಮವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಮಂದಿ ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.4ರಷ್ಟು ದಾಖಲಾಗಿದ್ದು, ಸಾವುನೋವುಗಳೊಂದಿಗೆ ಹಲವು ಕಟ್ಟಡಗಳಿಗೆ ಹಾನಿಗಳಾಗಿವೆ. ವಾಸದ ಮನೆಗಳೂ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು

ಕಾರ್ಕಳ: ನ. 21: ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಕಾಪು ತಾಲೂಕಿನ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ

ಮಂಗಳೂರು: ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ. ಗೋಡೆಯ ಮೇಲೆ ಭಯೋತ್ಪಾದಕ ಬರಹ ಬರೆದಿದ್ದ ಪ್ರಕರಣದಲ್ಲಿ ಶರೀಕ್ ನ್ನು 2020 ರ ನವೆಂಬರ್ ನಲ್ಲಿ ಬಂಧಿಸಲಾಗಿತ್ತು. ಆತ ಇತ್ತೀಚೆಗಷ್ಟೇ ಜಾಮೀನು ಪಡೆದು

ವಾಷಿಂಗ್ಟನ್: ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್‌ನಲ್ಲಿರುವ ಎಲ್‌ಜಿಬಿಟಿಕ್ಯು ನೈಟ್‌ಕ್ಲಬ್‌ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. "ಇಂದು ಸಂಜೆ ಸ್ಥಳೀಯ ಕ್ಲಬ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಮತ್ತು ಐವರು ಸಾವನ್ನಪ್ಪಿದ್ದಾರೆ" ಎಂದು ಪೊಲೀಸ್ ವಕ್ತಾರ

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹೇಳಿದ್ದಾರೆ. "ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಮಿಷನರ್ ಅವರಿಗೆ ಈ ಬಗ್ಗೆ ಕೆಲ ಮಾಹಿತಿ ಇದೆ. ಮಾಹಿತಿ ಕಳ್ಳತನದ ಬಗ್ಗೆ ನಮಗೆ ಆತಂಕವಿದೆ ಮತ್ತು ಅದನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ.

ಕೋಲ್ಕತ್ತಾ: ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ಬ್ರೈನ್ ಸ್ಟ್ರೋಕ್‌ನಿಂದ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಐಂದ್ರಿಲಾ ಶರ್ಮಾ ಅವರಿಗೆ ನವೆಂಬರ್ 1 ರಂದು ಬ್ರೈನ್ ಸ್ಟ್ರೋಕ್ ಆಗಿದ್ದು, ಹೌರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 24 ವರ್ಷದ ನಟಿ ಇಂದು

ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗ್ಗೆ ಸ್ವತಃ ಡಿಜಿಪಿ ಪ್ರವೀಣ್ ಸೂದ್ ಅವರು ಉಗ್ರ ಕೃತ್ಯ ಎಂದು ಸ್ಪಷ್ಟ ಪಡಿಸಿದ್ದು, ಟಾರ್ಗೆಟ್ ಸಿಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಮೂಡುತ್ತಿದೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮಂಗಳೂರಿನಲ್ಲಿರುವಾಗಲೇ ಬಸ್

ಮುಂಬೈ: ಹಿರಿಯ ನಟಿ ತಬಸ್ಸುಮ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಬಾಲ ಕಲಾವಿದೆಯಾಗಿ ಮತ್ತು ಜನಪ್ರಿಯ ದೂರದರ್ಶನ ಟಾಕ್ ಶೋ ಫೂಲ್ ಖಿಲೆ ಹೈ ಗುಲ್ಶನ್ ಗುಲ್ಶನ್ ನಿರೂಪಕಿಯಾಗಿ ಹೆಸರುವಾಸಿಯಾಗಿದ್ದ ತಬಸ್ಸುಮ್  ಹೃದಯ ಸ್ತಂಭನದ ನಂತರ ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ಹೋಶಾಂಗ್ ಗೋವಿಲ್ ತಿಳಿಸಿದ್ದಾರೆ. ಕೆಲವು

ವಾಷಿಂಗ್ಟನ್: 2021ರ ಜನವರಿ 6ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆ ವೇಳೆ ಗಲಾಟೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಶಾಶ್ವತವಾಗಿ ಅಮಾನತುಗೊಂಡಿದ್ದ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟ್ವಿಟರ್ ಖಾತೆ ಮರುಸ್ಥಾಪನೆ ಮಾಡಲಾಗುತ್ತದೆ ಎಂದು ಟ್ವಿಟರ್‌ನ ಹೊಸ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ. 2021ರ ಜನವರಿ 6ರಂದು

ಜಾರ್ಖಂಡ್: ಮಾವೋವಾದಿ ನಿಗ್ರಹ ಕಾರ್ಯಾಚರಣೆಯ ವೇಳೆ ಅವರು ಅಡಗಿಸಿಟ್ಟಿದ್ದ 120 ಸುಧಾರಿತ ಸ್ಫೋಟಕಗಳು ಪತ್ತೆಯಾಗಿದ್ದು, ಅವುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಜಾರ್ಖಂಡ್ ನ ಲತೇಹರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಭದ್ರತಾ ಪಡೆಗಳನ್ನು ಟಾರ್ಗೆಟ್ ಮಾಡಿ ಈ ಸುಧಾರಿತ ಸ್ಫೋಟಕಗಳನ್ನು ಇರಿಸಲಾಗಿತ್ತು. ಬುದಪಾಹದ್ ಎಂಬ ಪ್ರದೇಶದಲ್ಲಿ ಈ ಐಇಡಿಗಳು ಪತ್ತೆಯಾಗಿದ್ದು ಈ ಪ್ರದೇಶ ಈ ಹಿಂದೆ