Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಬೆಂಗಳೂರು: ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. ಹೌದು..  ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಬೀದರ್: ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶ್ರೀರಾಮ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದನು. ಬ್ರಿಮ್ಸ್ ಹಾಸ್ಟೆಲ್‌ನಲ್ಲಿ ವಾಸವಿದ್ದ ಆತ ಬೆಳಗ್ಗೆ ಆತ್ಮಹತ್ಯೆ

ಚಿಕ್ಕಮಗಳೂರು: ಮುಳ್ಳು ಹಂದಿ ಬೇಟೆಗೆ ತೆರಳಿದ್ದ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ. ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ

ಉಡುಪಿ:ಜಿಲ್ಲೆಯ ಮೊದಲ ದೊಡ್ಡ ಇ೦ಟರ್ ನ್ಯಾಷನಲ್ ಹೊಟೇಲ್ ಆಗಿರುವ ಉಡುಪಿಯ ಕರಾವಳಿ ಬೈಪಾಸ್ ಬಳಿಯಲ್ಲಿ ಪ್ರಸಿದ್ಧ ಶಾರದಾ ಇ೦ಟರ್ ನ್ಯಾಷನಲ್ ನ ಹೊರಾ೦ಗಣದಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಯಾನ್ ರೆಸ್ಟೋರೆ೦ಟ್ ನ್ನು ಸೋಮವಾರದ೦ದು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ರವರು ವಿದ್ಯುಕ್ತವಾಗಿ ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ನಗರಸಭೆಯ

ಚೆನ್ನೈ:ಫೆ 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. 7ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟವರು. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು

ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ

ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು

ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು ವಿವರಗಳನ್ನು ಒದಗಿಸಲಾಗಿದೆ. ಅಂಕಿಅಂಶಗಳನ್ನು ನ್ಯೂಯಾರ್ಕ್‌ನಲ್ಲಿ ಪ್ರತಿ ವಹಿವಾಟು ದಿನದ

ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ. ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ಪ್ರಪ್ರಥಮ ರಥೋತ್ಸವವು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ ಹಯವದನ ತಂತ್ರಿ ನೇತ್ರತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ, ಮಹಾಪೂಜೆ, ಬಲಿ ಪೂಜೆ,ಯೊ೦ದಿಗೆ ಪಲ್ಲಪೂಜೆ, ದೇವರ ರಥಾರೋಹಣ ಕಾರ್ಯಕ್ರಮವು ಅದ್ದೂರಿಯಿ೦ದ