Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಉಡುಪಿ:ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನದ೦ತೆ ಉಡುಪಿಯ ಪೌರಾಯುಕ್ತ ಡಾ.ಉದಯಕುಮಾರ್ ಶೆಟ್ಟಿ ಅವರನ್ನು ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರಸಭೆಗೆ ಪೌರಾಯುಕ್ತರಾಗಿ ವರ್ಗಾವಣೆಯನ್ನು ಮಾಡಲಾಗಿದೆ. ಉಡುಪಿಯ ನಗರಸಭೆಯ ನೂತನ ಪೌರಾಯುಕ್ತರಾಗಿ ಕಾರವಾರ ನಗರಸಭೆಯ ರಮೇಶ್ ಪಿ ನಾಯ್ಕ ಅವರನ್ನು ನಿಯೋಜಿಸಿ ಸರಕಾರ ಆದೇಶವನ್ನು ಹೊರಡಿಸಿದೆ.

ಮೈಸೂರು:ಫೆ 16. ಡಬಲ್ ಇಂಜಿನ್ ಸರ್ಕಾರ ವೇಗವಾಗಿ ರಾಜ್ಯದ ಅಭಿವೃದ್ಧಿ ಮಾಡಲಿದೆ ಎಂದು ಭಾವಿಸಿದ್ದೆವು. ಆದರೆ ಈ ಇಂಜಿನ್ ಆರಂಭವಾಯಿತೇ ಹೊರತು, ಮುಂದಕ್ಕೆ ಹೋಗಲೇ ಇಲ್ಲ. ಬರೀ ಹೊಗೆ ಮಾತ್ರ ಬಂತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮೈಸೂರು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,

ನವದೆಹಲಿ:ಫೆ 16. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಫುಟ್ಬಾಲ್ ಆಟಗಾರ ಮತ್ತು ಒಲಿಂಪಿಯನ್ ತುಳಸೀದಾಸ್ ಬಲರಾಮ್ ಅವರು ಗುರುವಾರ ನಿಧನ ಹೊಂದಿದ್ದಾರೆ. 87 ವರ್ಷ ವಯಸ್ಸಿನ ಬಲರಾಮ್ ಉತ್ತರಪಾರಾದ ಹೂಗ್ಲಿ ನದಿಯ ದಡದಲ್ಲಿರುವ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಮೂತ್ರದ ಸೋಂಕು ಮತ್ತು ಕಿಬ್ಬೊಟ್ಟೆಯ ಹಿಗ್ಗುವಿಕೆ ಚಿಕಿತ್ಸೆಗಾಗಿ

ಪಣಜಿ:ಫೆ 16. ರಜಾ ಕಳೆಯುವುದಕ್ಕಾಗಿ ಭಾರತಕ್ಕೆ ಬಂದಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಹೆತ್ತವರಾದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರೊಂದಿಗೆ ಗೋವಾದ ಬೀಚ್‌ನಲ್ಲಿ ದಿನಗಳೆದಿದ್ದಾರೆ. ದಕ್ಷಿಣ ಗೋವಾದ ಬೆನಾಲಿಮ್ ಬೀಚ್‌ನಲ್ಲಿ ಹೆತ್ತವರು ಮತ್ತು ತಮ್ಮಿಬ್ಬರು ಮಕ್ಕಳೊಂದಿಗೆ ಅಕ್ಷತಾ ಮೂರ್ತಿ

ಧನ್ಬಾದ್: ಜಾರ್ಖಂಡ್‌ ರಾಜ್ಯದ ಧನ್‌ಬಾದ್ ಜಿಲ್ಲೆಯಲ್ಲಿ ನಾಲ್ವರು ಯುವಕರು 16 ವರ್ಷದ ಬಾಲಕಿಯನ್ನು ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್‌ನ ಮೇಲ್ಛಾವಣಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಭಯಾನಕ ಘಟನೆ ನಡೆದಿದೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 170 ಕಿಮೀ ದೂರದಲ್ಲಿರುವ ಬರ್ವಡ್ಡಾ ಪೊಲೀಸ್ ಠಾಣಾ ವ್ಯಾಪ್ತಿಯ ಭೇಲತಾಂಡ್ ಪ್ರದೇಶದಲ್ಲಿ ನಿನ್ನೆ ಸಂಜೆ

ಶ್ರೀನಗರ: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಬಾಕಿ ವೇತನ ಬಿಡುಗಡೆ ಮಾಡುವಂತೆ ಮುಷ್ಕರ ನಿರತ ಪಿಎಂ ಪ್ಯಾಕೇಜ್ ಕಾಶ್ಮೀರಿ ಪಂಡಿತ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ ಎಂದೂ ಅವರು ಮನವಿ ಮಾಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ನಮ್ಮ ಸಂಬಳವನ್ನು ನಿಲ್ಲಿಸಲಾಗಿದೆ. ಮಹಾ ಶಿವರಾತ್ರಿಯಂದು ನಮ್ಮ ಬಾಕಿ

ಪಟಾನ್: ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ಬುಧವಾರ ಮಧ್ಯಾಹ್ನ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ಅಪಘಾತ ಸಂಭವಿಸಿದೆ, ರಾತ್ರಿಯಿಡಿ ತನಿಖೆ ನಡೆಸಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೀಪ್ ಸುಮಾರು

ವಾಷಿಂಗ್ಟನ್: ಫೆ 15. ಭಾರತೀಯ ಮೂಲದ , ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ನೀ ನಿಮ್ರತಾ ರಾಂಧವಾ ಅವರು 2024 ರಲ್ಲಿ ಅಮೆರಿಕ ಅಧ್ಯಕ್ಷೀಯ ಸ್ಥಾನ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಸಂಶಯಗಳಿಗೆ ತೆರೆ ಎಳೆದಿದ್ದಾರೆ. ನಿಕ್ಕಿ, ವಿಡಿಯೋ ಮೂಲಕ ತಮ್ಮ ಸ್ಪರ್ಧೆ ಖಚಿತಪಡಿಸಿ ,"ಹೊಸ ಪೀಳಿಗೆಯ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಬುಧವಾರದ೦ದು ಬೆಳಿಗ್ಗೆ ಮೀನ ಲಗ್ನ ಸುಮೂರ್ಹತದಲ್ಲಿ ಪಣಿಯಾಡಿ ಇತಿಹಾಸದಲ್ಲಿ ಪ್ರಪ್ರಥಮವಾಗಿ ತಾಮ್ರದ ಹೊದಿಕೆಯ ನೂತನ ಧ್ವಜಸ್ತಂಭ(ಕೊಡಿ ಮರ) ಪ್ರತಿಷ್ಠಾಪನೆ, ಕಲಶಾಭೀಷೇಕವನ್ನು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ

ಉಡುಪಿ:ಫೆ.17ರಿ೦ದ 24ರವರೆಗೆ ಉಡುಪಿ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವಉಡುಪಿ: ಫೆ.17ರಿ೦ದ 24ರ ವರೆಗೆ ಉಡುಪಿಯ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವವು ಜರಗಲಿದೆ.ಫೆ.17ರ ಸಾಯ೦ಕಾಲ ಪ್ರಾರ್ಥನೆಯೊ೦ದಿಗೆ ಆರ೦ಭಗೊಳ್ಳಲಿದೆ. ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವದ