Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಕೋಲ್ಕತ್ತಾ: ಈಶಾನ್ಯ ರಾಜ್ಯಗಳಲ್ಲಿ ಹೀನಾಯ ಸೋಲಿನಿಂದ ಎಚ್ಚೆತ್ತ ತೃಣಮೂಲ ಕಾಂಗ್ರೆಸ್‌, ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಯ್ದುಕೊಳ್ಳಲು ಮತ್ತು ಈ ಎರಡೂ ಪಕ್ಷಗಳನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ. ತ್ರಿಪುರಾದಲ್ಲಿ ಟಿಎಂಸಿ ನೋಟಾ ಪಡೆದ ಮತಗಳಿಗಿಂತ ಕಡಿಮೆ ಮತ ಪಡೆದಿದ್ದು, ಮೇಘಾಲಯದಲ್ಲೂ ಪಕ್ಷದ ಶಾಸಕರ ಸಂಖ್ಯೆ 11 ರಿಂದ

ಪಾಟ್ನಾ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂದಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದ ಶೋಧ ಕಾರ್ಯ ನಡೆಸಿದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ಸೋಮವಾರ ವಿಚಾರಣೆ ನಡೆಸುತ್ತಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ  ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು 14 ದಿನಗಳ ಅಂದರೆ ಮಾರ್ಚ್ 20 ವರೆಗೆ

ಲಖನೌ: ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕೇವಲ 8 ದಿನಗಳ ಅಂತರದಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ. 2005ರಲ್ಲಿ ನಡೆದಿದ್ದ ಬಿಎಸ್‌ಪಿ ಶಾಸಕನ ಕೊಲೆ ಪ್ರಕರಣದ

ಹುಬ್ಬಳ್ಳಿ:  ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದಲ್ಲಿರುವ ಎರಡು ಮನೆಗಳಲ್ಲಿ 12 ಮಂದಿ ಕುಟುಂಬ ಸದಸ್ಯರು ಮಲಗಿದ್ದರು. ಗ್ರಾಮಸ್ಥರ ಗುಂಪು

ಚಂಡೀಗಢ:ಮಾ 05. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಆರೋಪದ ಮೇಲೆ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ತರಬೇತಿಯಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ನೈನಾ ಕನ್ವಾಲ್ ಟ್ರೈನಿ ಎಸ್‌ಐ ಆಗಿ ರಾಜಸ್ಥಾನದಲ್ಲಿ ಕರ್ತವ್ಯದಲ್ಲಿದ್ದು, ದೆಹಲಿಯ ಪೊಲೀಸರು ಹರಿಯಾಣ ಪೊಲೀಸರ ಸಹಕಾರದೊಂದಿಗೆ ಇತ್ತೀಚೆಗೆ ನೈನಾ ಅವರ ರೋಹ್ಟಕ್ ಫ್ಲ್ಯಾಟ್‌ ವೊಂದಕ್ಕೆ ದಾಳಿ

ಪರ್ಕಳ ಇಲ್ಲಿನ ಅರ್ಜುನ ಯುವಕ ಮಂಡಲದಿಂದ ಸರಳೇಬೆಟ್ಟು ರಾಮಮಂದಿರದ ತನಕ.ನೂತನ ಕಾಂಕ್ರೀಟ್ ಪೂರ್ಣ ಗೊಂಡಂತಿದೆ ಈ ರಸ್ತೆ ಅಗಲೀಕರಣದ ವಿಚಾರದಲ್ಲೂ ಒಂದೊಂದು ಬದಿಯಲ್ಲಿ ಒಂದೊಂದು ತರ ಅಗಲೀಕರಣ ಪ್ರಕ್ರಿಯೆನಡೆಸಿ ಕಳೆದ ವರ್ಷ. ಮನಬಂದಂತೆ ಆಗಲಿಕರಣದ ಪ್ರಕ್ರಿಯೆನಡೆದು ಮಳೆಗಾಲದಲ್ಲಿ ರಸ್ತೆಯನ್ನು ಅಗೆದು ಅರ್ಧಂಬರ್ಧ ವಾದ ಕಾಮಗಾರಿನಡೆಸಿದ ತಾಜ ಉದಾರಣೆ ಈಗಲೂಕಂಡು

ಚೆನ್ನೈ:ಮಾ 05 . ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್

ಮಂಗಳೂರು:ಮಾ. 05, ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ

ಉಡುಪಿ:ಮಾ,05. ಪ್ರತಿವರ್ಷವೂ ಗ್ರಾಹಕರ ಅಪಾರ ಬೆಂಬಲದಿಂದ ಹರ್ಷೋತ್ಸವವು ಯಶಸ್ವಿಯಾಗಿ ನಡೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಭಾರೀ ಜನಮನ್ನಣೆ ಗಳಿಸುತ್ತಾ, ಎಲ್ಲರ ನೆಚ್ಚಿನ ಶಾಪಿಂಗ್ ಹಬ್ಬವಾಗಿ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ. ಈ ಬಾರಿಯೂ ಇನ್ನಷ್ಟು ವೈಶಿಷ್ಟ್ಯಯಗಳೊಂದಿಗೆ ಏಳು ದಿನಗಳು ನಡೆಯಲಿರುವ ಹೊಸ ರೂಪದ ಹರ್ಷೋತ್ಸವವು ನಿಮ್ಮ ಶಾಪಿಂಗ್‌ಗೆ ಒಂದು ವಿನೂತನ ಮೆರುಗನ್ನು ನೀಡಲಿದೆ. ಹರ್ಷದ