Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5

ಮಂಗಳೂರು, ಮೇ 29: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಟಿಎಸ್ ನಾಗಭರಣ ಸೇರಿದಂತೆ ಗಣ್ಯರು ಸಮಾಜಸೇವಾ ವಿಭಾಗದಲ್ಲಿ ಸಾಧನೆಗೈದ

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ

ಉಡುಪಿ: ಹಿರಿಯ ಲೆಕ್ಕಪರಿಶೋಧಕ, ಅಜ್ಜರಕಾಡು ಅಗ್ನಿಶಾಮಕ ದಳ ಕಚೇರಿ ಬಳಿಯ ನಿವಾಸಿ ಯು.ಕೆ. ಮಯ್ಯ (ಕೃಷ್ಣಮೂರ್ತಿ ಮಯ್ಯ) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಉಡುಪಿ ಜಿಲ್ಲೆಯ ಪ್ರಥಮ ಲೆಕ್ಕಪರಿಶೋಧಕರು ಎಂಬ ಖ್ಯಾತಿ ಪಡೆದಿದ್ದರು. ಉಡುಪಿ ವಿದ್ಯಾರತ್ನ ಕಟ್ಟಡದಲ್ಲಿ ಕಚೇರಿ ಪ್ರಾರಂಭಿಸಿದ್ದರು. ಅವರ ಮಾರ್ಗದರ್ಶನದಲ್ಲಿ

ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್‌ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ

ಶ್ರೀಹರಿಕೋಟಾ:  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು  ಯಶಸ್ವಿಯಾಗಿ ಉಡಾವಣೆ ಮಾಡಿದೆ. ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ರಂಭಾಪುರಿ ಕಾಲೇಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ

ಕಾರವಾರ: ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ.  ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು, ಆಗ ಸುಪ್ರೀಂ ಕೋರ್ಟ್ ಕರ್ನಾಟಕದ ಅದಿರನ್ನ ಎಲ್ಲಿಗೂ ರಫ್ತಾಗದಂತೆ

ಉಡುಪಿಯಲ್ಲಿ ಪ್ರತಿವರ್ಷವೂ ಮನೆಗಳ ಸ೦ಖ್ಯೆ ಸೇರಿದ೦ತೆ ವಸತಿಗೃಹಗಳ ಸ೦ಖ್ಯೆಯು ಹೆಚ್ಚುತ್ತಿದೆ.ಅದರ೦ತೆಯೇ ನೀರಿನ ಹಾಗೂ ವಿದ್ಯುತ್ ಸೇರಿದ೦ತೆ ಎಲ್ಲ ವಸ್ತುಗಳ ಬೇಡಿಕೆಯು ಹೆಚ್ಚುತ್ತಿದೆ.ಮಳೆಯು ಈ ಬಾರಿ ಕೈಕೊಟ್ಟಕಾರಣದಿ೦ದಾಗಿ ಮಾತ್ರವಲ್ಲದೇ ಮದುವೆ ಇನ್ನಿತರ ಕಾರ್ಯಕ್ರಮಗಳೂ,ಉತ್ಸವ,ಹೋಮ,ದೇವಸ್ಥಾನಗಳ ಜೀರ್ಣೋದ್ದಾರ,ಕೋಲ,ತ೦ಬಿಲಗಳು ನಡೆದಿರುವುದರಿ೦ದಾಗಿ ನೀರಿನ ಬಳಕೆಯು ಹೆಚ್ಚಿದ್ದು ಇದರಿ೦ದಾಗಿ ಈ ಬಾರಿ ಹಿ೦ದಿಗಿ೦ತಲೂ ನೀರಿನ ಅಭಾವವ೦ತೂ ಹೆಚ್ಚಿದೆ. ನಗರಸಭೆಯು

ಮಂಗಳೂರು:ಮೇ 28.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾದಿಂದ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ ಸಿಐಎಸ್ಎಫ್ ಸಿಬಂದಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರನ್ನು ತಡೆದಿದ್ದು, ಬೆಲೆಬಾಳುವ ಹರಳುಗಳಿರುವ ಶಂಕೆಯ ಮೇರೆಗೆ ಆತನ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ 2 ಪೌಚ್‌ಗಳನ್ನು ವಶಕ್ಕೆ