``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಆಫ್ರಿಕಾ:ಆ 17. ಸೆನೆಗಲ್‌ನಿಂದ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಕೇಪ್ ವರ್ಡೆಯ ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿದ ಪರಿಣಾಮ 60ಕ್ಕೂ ಹೆಚ್ಚು ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜುಲೈ 10 ರಂದು ಸೆನೆಗಲ್‌ನಿಂದ ಹೊರಟಿದ್ದು 101 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದು ಇದು ಸೆನೆಗಲ್‌ನಿಂದ ಹೊರಟಿದ್ದು, ಮಂಗಳವಾರ ಕೇಪ್‌ ವರ್ಡೆ ದ್ವೀಪದಲ್ಲಿ ಮಗುಚಿದೆ. ಕೇಪ್ ವರ್ಡೆಯ ಸಾಲ್ಟ್

ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.  ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ

ನವದೆಹಲಿ: 13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ  32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ. ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಅವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ

ಉಡುಪಿ:ಪ್ರವೀಣಾ ಕರಾಟೆ ಕ್ಲಬ್ ಪ್ರರ್ಕಳ ಇದರ ಕರಾಟೆ ತರಬೇತಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಗರಿಷ್ಠ ಅನುದಾನದ ಭರವಸೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಖಾಸಗಿ ಹೋಟೆಲ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು ಮನವಿಗೆ ಸ್ಪಂದಿಸಿದ ಹೆಬ್ಬಾಳ್ಕರ್ ರವರು ತಕ್ಷಣ ಕ್ರೀಡಾಇಲಾಖೆಯ

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ

ಬೆಂಗಳೂರು: ಕರ್ನಾಟಕದ ವಿಧಾನಪರಿಷತ್‌ಗೆ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬಹಿರಂಗವಾಗಿಯೇ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಕರ್ನಾಟಕ ವಿಧಾನಪರಿಷತ್​ಗೆ (Karnataka Legislative Council)  ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ರವಾನಿಸಿದ್ದು,  ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ (Former Minister Umashri), ಎಂಆರ್

ಮಂಗಳೂರು: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತನಿಖಾಧಿಕಾರಿ(ಐಒ) ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತನಿಖಾ ತಂಡ, ಈಗಾಗಲೇ ಉಡುಪಿಯ ನೇತ್ರ ಜ್ಯೋತಿ

ಉಡುಪಿ:ಉಡುಪಿ ರಥಬೀದಿಯ ರಿಕ್ಷಾ ಚಾಲಕ,ಮಾಲಕರ ಸಂಘದ ವತಿಯಿಂದ ಮ೦ಗಳವಾರದ೦ದು ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಶೀರೂರು ಮಠದ ದಿವಾನರಾದ ವಿದ್ವಾನ್ ಉದಯಕುಮಾರ ಸರಳತ್ತಾಯರು ಹಾಗೂ ರಥಬೀದಿಯ ರಿಕ್ಷಾ ಚಾಲಕ,ಮಾಲಕರ ಸಂಘದ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.

ಉಡುಪಿ:ಅ.15:ಯಕ್ಷಗಾನ ತಾಳಮದ್ದಳೆಯ ಮೂಲಕ "ಕಾಶ್ಮೀರ ವಿಜಯ"ಪ್ರಸ್ತುತಿಯೊ೦ದಿಗೆ ಜನಮಾನಸದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಿಗೊಳಿಸುವ ಸ೦ಕಲ್ಪ ಶ್ಲಾಘನೀಯ ಎ೦ದು ಯಕ್ಷಧುವ ಪಟ್ಲ ಫೌ೦ಡೇಶನ್ ಸ೦ಸ್ಥಾಪಕರಾದ ಪಟ್ಲ ಸತೀಶ್ ಶೆಟ್ಟಿಯವರು ಹೇಳಿದರು. ಅವರು ಸುಶಾಸನ ಉಡುಪಿ ಪ್ರಾಯೋಕತ್ವದಲ್ಲಿ ಸುಧಾಕರ ಆಚಾರ್ಯರ ಕಲಾರಾಧನೆಯ 33ನೇ ವರ್ಷದ ಸ್ವಾತ೦ತ್ರ್ಯೋತ್ಸವತಾಳಮದ್ದಳೆ ಕಾರ್ಯಕ್ರಮವನ್ನು ಮ೦ಗಳವಾರದ೦ದು ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನಹಾಲ್ ನಲ್ಲಿ