Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿಯ ವಾಸ್ತವ್ಯಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಬೃಹತ್ ಜರ್ಮನ್ ಟೆಂಟ್​ಗಳನ್ನು ನಿರ್ಮಿಸಲಾಗುತ್ತಿದೆ. ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ 5

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಗುರುವಾರದ೦ದು ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸಂಘ(ರಿ) ಉಡುಪಿ ಇವರ ಸಹಯೋಗದಲ್ಲಿ ಶ್ರೀಕನಕದಾಸರ 536 ನೇ ಜಯಂತಿ ಮಹೋತ್ಸವದ ಸಭಾಕಾರ್ಯಕ್ರಮವನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಪಾಳೇಗಾರರಾಗಿದ್ದ ತಿಮ್ಮಪ್ಪ ನಾಯಕ ಲೌಕಿಕ ಸುಖಗಳನ್ನು ತೊರೆದು ದೇವರ ದಾಸರಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 108 ಆಂಬ್ಯುಲೆನ್ಸ್ ಸೇವೆಗಳ ನೂತನ 262 ಗಳನ್ನು ಗುರುವಾರ ವಿಧಾನಸೌಧ ಮುಂದೆ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂಪಾಯಿ

ಬೆಂಗಳೂರು: ಸೂಕ್ತ ಕಾರಣ ಇಲ್ಲದೆ ಕೆಳ ಹಂತದ ಅಧಿಕಾರಿಯನ್ನು ಉನ್ನತ ಹುದ್ದೆಗೆ ನೇಮಿಸಲು ಮುಖ್ಯಮಂತ್ರಿಗಳ ಸಹಿ ಹೊಂದಿರುವ ವರ್ಗಾವಣೆ ಆದೇಶ ಮಾತ್ರ ಸಾಕಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಅಂತಹ ವರ್ಗಾವಣೆ ಆದೇಶಗಳು ಮುಖ್ಯಮಂತ್ರಿಗಳ ಸಹಿಯನ್ನು ಹೊಂದಿದ್ದರೂ ಸಹ, ಅರ್ಹರ ಲಭ್ಯತೆಯಿಲ್ಲದಿರುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡದ ಕಾರಣ ಅಂತಹ ಆದೇಶಗಳನ್ನು

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಮಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. 17 ದಿನಗಳ ನಿರಂತರ ಕಾರ್ಯಾಚರಣೆ ಅಂತೂ ನಿನ್ನೆ ಯಶಸ್ವಿಯಾಗಿತ್ತು. ಆದರೆ 41 ಕಾರ್ಮಿಕರಲ್ಲಿ ಒಬ್ಬನ ತಂದೆ ತನ್ನ ಮಗನನ್ನು ಸ್ಥಳಾಂತರಿಸುವ ಕೆಲವೇ ಗಂಟೆಗಳ ಮುನ್ನ 'ಆತಂಕದಿಂದ' ನಿಧನರಾಗಿದ್ದಾರೆ. ಈ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ. ಜಾರ್ಖಂಡ್‌ನ ನಿವಾಸಿ

ಟೆಲ್ ಅವೀವ್: ಇಸ್ರೇಲ್ ಮತ್ತು ಹಮಾನ್ ನಡುವಿನ ಯುದ್ಧ ಕದನ ವಿರಾಮ ವಿಸ್ತರಣೆಯಾಗಿದ್ದು, ಇದು ಅಂತ್ಯವಾಗುವ ಅಂತಿಮ ಕ್ಷಣದಲ್ಲಿ ಉಭಯ ಪಡೆಗಳು ಈ ಮಹತ್ವದ ನಿರ್ಣಯ ಕೈಗೊಂಡಿವೆ. ಮೂಲಗಳ ಪ್ರಕಾರ ಉಭಯ ಪಡೆಗಳ ಮಧ್ಯವರ್ತಿ ಕತಾರ್ ಪ್ರಕಾರ, ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಾತ್ಕಾಲಿಕ ಕದನ ವಿರಾಮವನ್ನು ಮತ್ತೊಂದು ದಿನ ವಿಸ್ತರಿಸಲಾಗಿದೆ. ಕದನ ವಿರಾಮದ

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಪಕ್ಷದ ಕೆಲಸವನ್ನು ಮಾತ್ರ ಮಾಡಿದ್ದೇನೆ. ಅದಕ್ಕಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಬುಧವಾರ ಏಮ್ಸ್-ಋಷಿಕೇಶಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಅಂತ್ಯಗೊಂಡ 17 ದಿನಗಳ ಕಠಿಣ ಕಾರ್ಯಾಚರಣೆಯ ನಂತರ ಕುಸಿದ ಸುರಂಗದಿಂದ 41 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅವರನ್ನು ಚಿನ್ಯಾಲಿಸೌರ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ

ಉಡುಪಿ:ನ 29 : "ಪೊಲೀಸರಿಗೆ ದೈಹಿಕ ಸಾಮರ್ಥ್ಯ ಅತಿ ಮುಖ್ಯವಾಗಿದ್ದು, ಇಂತಹ ವಾರ್ಷಿಕ ಕ್ರೀಡಾಕೂಟಗಳು ಪೋಲಿಸರಿಗೆ ಸಹಾಯಕವಾಗಲಿವೆ" ಎಂದು ಉಡುಪಿ ಜಿಲ್ಲಾಧಿಕಾರಿ ಡಾಕ್ಟರ್ ‌ವಿದ್ಯಾ ಕುಮಾರಿ ಹೇಳಿದರು.‌ ಅವರು ಉಡುಪಿ ಜಿಲ್ಲಾ ಪೋಲಿಸ್ ನ ವಾರ್ಷಿಕ ಪೋಲಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. "ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಕ್ರೀಡಾ ಸ್ಫೂರ್ತಿ ಯೊಂದಿಗೆ

ಬ್ರಹ್ಮಾವರ:ನ 29: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ ಬಳಿ ನ. 29 ರ ಬುಧವಾರ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31) ಎಂದು ಗುರುತಿಸಲಾಗಿದೆ. ಪ್ರೀತಂ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ