Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಭದ್ರತೆಗೆಂದು ನಿಯೋಜಿಸಿದ್ದ ಕಮಾಂಡರ್ ಒಬ್ಬರಿಗೆ ಗುಂಡು ತಗುಲಿದೆ. ಅವರು ಆಯುಧಗಳನ್ನು ಸ್ವಚ್ಛಗೊಳಿಸುತ್ತಿರುವಾಗ ತಿಳಿಯದೇ ತಮಗೆ ತಾವೇ ಎಕೆ-47ನಿಂದ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ಅವರನ್ನು ಶ್ರೀ ರಾಮ್ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿಂದ ಅವರನ್ನು ಲಕ್ನೋದ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆಯ ನಂತರ,

ಬೆಳ್ತಂಗಡಿ:ಮಾ,26: ತನ್ನ 9 ತಿಂಗಳ ಮಗುವಿನೊಂದಿಗೆ ತಾಯಿ ಸಹಿತ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾ.22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ

ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.

ಪೇಶಾವರ ಮಾರ್ಚ್ 26: ವಾಯವ್ಯ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (suicide bomb) ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದ್‌ನಿಂದ ಖೈಬರ್ ಪಖ್ತುನ್‌ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್,

ಅಲ್ಲಿ ಇತ್ತೀಚೆಗೆ ನಾಯಿಗಳ ಭೀಕರ ದಾಳಿಗೆ ಮಕ್ಕಳು ನರಳಾಡಿ, ಸಾವಿನ ಕದ ತಟ್ಟಿ ಬಂದಿದ್ದರು. ಆದ್ರೀಗ ಅದೇ ಜಾಗದಲ್ಲಿ ಆಟವಾಡ್ತಿದ್ದ ಮಕ್ಕಳ ಮೇಲೆ ನಾಯಿಗಳ ಬದಲು ಹಂದಿಗಳು ಡೆಡ್ಲಿ ಅಟ್ಯಾಕ್ ನಡೆಸಿದ್ದು ಬಾಲಕಿ (girl) ಸ್ಥಿತಿ ಗಂಭೀರವಾಗಿದೆ. ಆಟವಾಡಿಕೊಂಡು ಇರಬೇಕಿದ್ದ ವಯಸ್ಸಲ್ಲಿ ಆಕೆ ಭೀಕರ ದಾಳಿಗೆ ಒಳಗಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ.

ಉಡುಪಿ, ಮಾ.26: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ

ದೆಹಲಿ ಮದ್ಯನೀತಿ(Liquor Policy) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯವು ಬಂಧಿಸಿತ್ತು.

ನವದೆಹಲಿ: ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ. ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಪ್ರಯೋಗಾಲಯ ಪರೀಕ್ಷೆಗಳಲ್ಲಿನ ಸಮಸ್ಯೆಗಳ ಬಗ್ಗೆ

ಬೆಂಗಳೂರು: ತಮಿಳುನಾಡಿನ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ಖಾಸಗಿ ಹೂಡಿಕೆ ಸಂಸ್ಥೆಗಳ ಅಧಿಕಾರಿಗಳು ಪರಸ್ಪರ ಶಾಮೀಲಾಗಿ ಅದೇ ಬ್ಯಾಂಕ್ ಶಾಖೆಯಲ್ಲಿ ಮೃತ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದು ಆಕೆಯ ಖಾತೆಯಿಂದ 13 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ನಗರದ ಸಿದ್ದಾಪುರ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ ತಗುಲಿತ್ತು. ಪರೀಕ್ಷೆಯಲ್ಲಿ ದೃಢಪಟ್ಟ ನಂತರ, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ