ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪುಣೆ: ಮಹಾರಾಷ್ಟ್ರದ ಪುಣೆಯ ಬವ್‌ಧಾನ್‌ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ಸಂಭವಿಸಿದೆ. ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎನ್ನುವುದು ಸ್ಪಷ್ಟವಾಗಿ ತಿಳಿದು

ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ.

ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ

ಉಡುಪಿ, ಅಕ್ಟೋಬರ್ 2: ಪ್ರಪಂಚದಲ್ಲಿ ಚೀನಾದಿಂದ ಯಾವುದೇ ವಸ್ತು ಬಂದರೂ ಅದಕ್ಕೆ ಗ್ಯಾರಂಟಿ ಇಲ್ಲ ಅಥವಾ ಅದು ಅಸಲಿ ಅಲ್ಲ ಎನ್ನುವ ಮಾತಿದೆ. ಈ ಹಿಂದೆ ಚೀನಾದಿಂದ ಪ್ಲಾಸ್ಟಿಕ್ ಅಕ್ಕಿ ಬರುತ್ತಿದೆ ಎನ್ನುವ ಸುದ್ದಿ ದೊಡ್ಡ ಮಟ್ಟದ ಆತಂಕಕ್ಕೆ ಕಾರಣವಾಗಿತ್ತು. ಆ ಬಳಿಕ ತರಕಾರಿಗಳನ್ನು ಕೂಡ ಪ್ಲಾಸ್ಟಿಕ್​ನಿಂದ ತಯಾರಿಸಿ ಮಾರುಕಟ್ಟೆಗೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮುಖ್ಯದ್ವಾರದಬಳಿ ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯೆ ಮಾನಸ ಪೈ,ಮಠದ ದಿವಾನರಾದ ನಾಗರಾಜ ಆಚಾರ್ಯ,

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಉಡುಪಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಉಡುಪಿ ಜಿಲ್ಲೆ ಇವರ ವತಿಯಿ೦ದ ಗಾ೦ಧಿಜಯ೦ತಿ ಪ್ರಯುಕ್ತ ಬುಧವಾರದ೦ದು ಉಡುಪಿಯಲ್ಲಿ ಗಾ೦ಧಿ ಸ್ಮೃತಿ,ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ನಗರದ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಜಾಲನೆಯನ್ನು ನೀಡಲಾಯಿತು.ನಗರದ ಕೋರ್ಟ್ ಮು೦ಭಾಗಮಾರ್ಗವಾಗಿ ನಗರದ ಕೆ.ಎ೦.ಮಾರ್ಗ,ತ್ರಿವೇಣಿ

ಥೈಲ್ಯಾಂಡ್​,:ಅ.01ಥೈಲ್ಯಾಂಡ್​ನಲ್ಲಿ​ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿ ಘಟನೆ ನಡೆದಿದೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.ಸ್ಥಳೀಯ ಕಾಲಮಾನ ಮಧ್ಯಾಹ್ನ 12.30 ರ ಸುಮಾರಿಗೆ ಥೈಲ್ಯಾಂಡ್​ನ ರಂಗ್‌ಸಿಟ್

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು,

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ತನಿಖೆ ಆರಂಭಿಸಿದ್ದಾರೆ. ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಹೋಗಿ ಮುಡಾ ನಿವೇಶನ ಬಳಿ ಸ್ಥಳ ಮಹಜರು ನಡೆಸಿದ್ದಾರೆ. ಮುಡಾ ನಿವೇಶನ ಹಂಚಿಕೆಯಲ್ಲಿ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು