ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ, ಡಿಸೆಂಬರ್ 4: ಅದಾನಿ ಡಿಫೆನ್ಸ್ ಅಂಡ್ ಏರೋಸ್ಪೇಸ್ ಕಂಪನಿ ನಿರ್ಮಿಸಿರುವ ದೃಷ್ಟಿ-10 ಸ್ಟಾರ್​ಲೈನರ್ ಡ್ರೋನ್ ಅನ್ನು ಭಾರತೀಯ ನೌಕಾಪಡೆ ಪಡೆದುಕೊಂಡಿದೆ. ಇದು ಅದಾನಿಯಿಂದ ಸರಬರಾಜು ಆದ ಎರಡನೇ ಡ್ರೋನ್ ಆಗಿದೆ. ಸಮುದ್ರದಲ್ಲಿ ಸಾಗುವ ಹಡಗುಗಳ ಮೇಲೆ ಕಣ್ಣಿಡಲು ಮತ್ತು ಸಾಗರ ವಲಯದ ಭದ್ರತೆಗೆ ಸಹಾಯವಾಗಲು ಈ ಡ್ರೋನ್​ಗಳನ್ನು ಬಳಸಲಾಗುತ್ತದೆ.

ನಟಿ ರಮ್ಯಾ ಅವರು ಸಿನಿಮಾವನ್ನು ಬಿಟ್ಟರೂ ಅವರನ್ನು ಸಿನಿಮಾ ಬಿಡುತ್ತಿಲ್ಲ. ಹೌದು, ರಮ್ಯಾ ನಟಿಸಿರುವ ಒಂದು ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಇದನ್ನು ಹೊಸ ಸಿನಿಮಾ ಎನ್ನಬೇಕೋ ಅಥವಾ ಹಳೇ ಸಿನಿಮಾ ಎನ್ನಬೇಕು ಎಂಬುದು ಪ್ರೇಕ್ಷಕರಿಗೆ ಬಿಟ್ಟಿದ್ದು. ಯಾಕೆಂದರೆ, ಈ ಸಿನಿಮಾ ಸೆಟ್ಟೇರಿದ್ದು ಹಲವು ವರ್ಷಗಳ ಹಿಂದೆ. ಒಂದಷ್ಟು ಕಾರಣಗಳಿಂದ ಈ

ಉಡುಪಿ: ದೇಶದಲ್ಲಿ ಸ್ವಾತಂತ್ಕ್ಯ ದೊರಕಿ 78ವರ್ಷಗಳಾದರೂ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಸಂಶಯ ಕಾಡುತ್ತಿದೆ. ಯಾಕೆಂದರೆ ನಮ್ಮ ಜನರಿಗೆ ಇನ್ನೂ ನ್ಯಾಯ ಸಿಗುತ್ತಿಲ್ಲ. ಆದುದರಿಂದ ಆ ಸ್ವಾತಂತ್ರ್ಯ ಉಳಿಸಲು ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವನ್ನು ನಡೆಸಬೇಕೆ ಎಂಬ ಪ್ರಪಶ್ನೆ ಕಾಡುತ್ತಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ

ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮಗಳನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಹರಿಯಾಣ ಮೂಲದ ರಾಜೇಶ್, ಕೋಮಲ ಮತ್ತು ಕವಿತಾ ಎಂದು ತಿಳಿಯಲಾಗಿದೆ. ಕುಟುಂಬದ ನಾಲ್ಕನೇ ಸದಸ್ಯ ಪುತ್ರ ಬೆಳಗಿನ ಜಾವ

ಮುಂಬೈ: ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ. ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ

ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ

ಉಡುಪಿ :  ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಡಿ.1ರಂದು ನಿಧನರಾದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ

ಬೆಂಗಳೂರು, ಡಿಸೆಂಬರ್​ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯED ಪತ್ತೆ ಮಾಡಿದೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ

ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ