ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಈ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ
ಮೈಸೂರು, (ಜನವರಿ 28): ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಈವರೆಗಿನ ತನಿಖೆಯ ವರದಿಯನ್ನ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಆದ್ರೆ, ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಉಡುಪಿ ನಗರಸಭಾ ಸದಸ್ಯರಾಗಿ ರಾಜ್ಯ ಕಾಂಗ್ರೆಸ್ ಸರಕಾರದಿಂದ ಉಡುಪಿ ನಗರಸಭೆಗೆ ನಾಮ ನಿರ್ದೇಶನ ಸದಸ್ಯರಾಗಿರುವ ಸುರೇಶ್ ಶೆಟ್ಟಿ ಬನ್ನಂಜೆ ಸೋಮವಾರದ೦ದು ಉಡುಪಿ ನಗರಸಭೆಯ ಮಾಸಿಕ ಸಭೆಯಲ್ಲಿ ಭಾಗವಹಿಸಿ ಉಡುಪಿ ನಗರಸಭಾ ವ್ಯಾಪ್ತಿಯ ಕೆಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಶ್ನಿಸಿ ಅದಕ್ಕೆ ಪರಿಹಾರವನ್ನು ಕೊಡುವಂತೆ ನಗರ ಸಭೆ ಆಡಳಿತವನ್ನು ಪ್ರಶ್ನೆಸಿರೋದು
ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು
ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು
ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ 13 ಇನ್ನಿಂಗ್ಸ್ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. 2024ರಲ್ಲಿ ಅತಿ ಹೆಚ್ಚು
ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.
ಸುಳ್ಯ: ಜ.27, ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ