ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ: ಅಮೆರಿಕಾದಿಂದ ಗಡೀಪಾರು ಮಾಡಲಾಗುತ್ತಿರುವ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಆರೋಪಿ ತಹವ್ವೂರ್ ಹುಸೇನ್ ರಾಣಾ ಭಾರತ ತಲುಪದ ಕೂಡಲೇ ಆತನನ್ನು ತಿಹಾರ್ ಜೈಲಿನಲ್ಲಿರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ದೆಹಲಿಯ ತಿಹಾಲ್ ಜೈಲಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಭಾರತದ ಮೋಸ್ಟ್

ಉಡುಪಿ: ಏಪ್ರಿಲ್ 10: ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್  ವಿಚಾರದಲ್ಲಿ ಉಡುಪಿ ಶ್ರೀ ಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದೆ. ಕೃಷ್ಣ ಮಠದ ರಥ ಬೀದಿಯ ಆವರಣದಲ್ಲಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಪ್ರಕಟಿಸಿದೆ. ಬೆಳ್ಳಂಬೆಳಗ್ಗೆ

ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ

ಮಲ್ಪೆ; ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮೊಹೋತ್ಸವ ಆಚರಣೆ , ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಆದಿತ್ಯವಾರ ನೆಡೆಯಿತು. ಬೆಳ್ಳಿಗೆ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ ,

ಬೆಂಗಳೂರು, ಏಪ್ರಿಲ್ 08:  ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಶೇಕಡಾ 93.90ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ (Darshan) ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್​

ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ

ಕಲಬುರಗಿ: ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕರೊಬ್ಬರನ್ನು ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಶಿವರಾಜ ಹಣಮಂತ (32) ಬಂಧಿತ ಶಿಕ್ಷಕ. 8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯ ಕೆಲ ಭಾಗಗಳಲ್ಲಿ ಗುಡುಗು, ಮಿಂಚು

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭಾನುವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್​ ಕುಮಾರಿ (63) ಎಂದು ಗುರುತಿಸಲಾಗಿದೆ. ಮೃತರು