.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ವೈದ್ಯ​ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಹಾಸನ: ಆರ್.ಎಸ್.ಎಸ್ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಯೋಜನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್ ವೇಗಿ ಮಹಮದ್ ಶಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ

ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ